ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್ ಹಿಂದೂಗಳ ಭಾವನೆಗೆ ಧಕ್ಕೆ

By Mrutyunjaya Kalmat
|
Google Oneindia Kannada News

Pakistan Flag
ಇಸ್ಲಾಮಾಬಾದ್, ಮಾ.17 : ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳು ಹಿಂದೂಗಳ ಆರ್ಥಿಕ ಸಹಕಾರದಿಂದ ನಡೆಯುತ್ತಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ಹಿಂದೂ ಅಲ್ಪಸಂಖ್ಯಾತರ ಒಕ್ಕೂಟ ಪಾಕ್ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ ಕಲಾಪ ಬಹಿಷ್ಕರಿಸಿದ ಘಟನೆ ಬುಧವಾರ ನಡೆದಿದೆ.

ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳಿಗೆ ಅಲ್ಪಸಂಖ್ಯಾತ ಹಿಂದೂಗಳೇ ಕಾರಣ ಎಂದು ಲಾಹೋರ್ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಖ್ವಾಜಾ ಮೊಹಮ್ಮದ್ ಶರೀಫ್ ಅವರ ಹೇಳಿಕೆಗೆ ಪಾಕಿಸ್ತಾನದ ಹಿಂದೂ ಅಲ್ಪಸಂಖ್ಯಾತರ ಮುಖಂಡ ಹಾಗೂ ಪಾಕಿಸ್ತಾನಿ ಪೀಪಲ್ಸ್ ಪಾರ್ಟಿಯ ಸಂಸದ ರಮೇಶ್ ಲಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿರುವ 30 ಲಕ್ಷ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ಇದಾಗಿದ್ದು, ಈ ಬಗ್ಗೆ ಸರಕಾರ ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿ ಸದನದಿಂದ ಹೊರನಡೆದಿದ್ದಾರೆ.

ತಾಲಿಬಾನ್ ಮುಖಂಡನ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಲಾಹೋರ್ ಹೈಕೋರ್ಟ್ ನ್ಯಾಯಮೂರ್ತಿ, ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯಲ್ಲಿ ಹಿಂದೂಗಳ ಕೈವಾಡವಿದೆ. ಅಲ್ಲದೇ ಹಣಕಾಸಿನ ಸಹಾಯವನ್ನು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ನಾವು ಪಾಕಿಸ್ತಾನಕ್ಕೆ ದ್ರೋಹಕ್ಕೆ ಬಗೆಯುವ ಕೆಲಸಕ್ಕೆ ಎಂದೂ ಕೈಹಾಕುವುದಿಲ್ಲ. ಆದರೆ, ವಿನಾ ಕಾರಣ ಹಿಂದುಗಳ ಮೇಲೆ ಪದೆಪದೇ ಆರೋಪಗಳು ಕೇಳಿಬರುತ್ತಿವೆ ಎಂದು ರಮೇಶ್ ಲಾಲ್ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X