ಬ್ಯಾಲಾಳು ಶೂಟೌಟ್, ಉಗ್ರರ ಕೃತ್ಯವಲ್ಲ: ಚಿದು

ಬ್ಯಾಲಾಳುವಿನಲ್ಲಿ ನಡೆದ ಶೂಟೌಟ್ ಉಗ್ರರ ಕೃತ್ಯವಲ್ಲ. ಅಪರಿಚಿತರ ಗುಂಡಿನ ದಾಳಿಯಿಂದಾಗಿ ಇಸ್ರೋಗೆ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಭದ್ರತಾ ವಿಚಾರಗಳನ್ನು ಮರುಪರಿಶೀಲನೆ ನಡೆಸುವಂತೆ ಸಿಐಎನ್ ಎಫ್ಗೆ ಸೂಚನೆ ನೀಡಲಾಗಿದ್ದು, ಇಸ್ರೋ ಅಥವಾ ಅದರ ಘಟಕಗಳಿಗೆ ಯಾವುದೇ ಅಪಾಯವಿಲ್ಲ ಎಂದು ಗೃಹಸಚಿವ ಪಿ.ಚಿದಂಬರಂ ಸ್ಪಷ್ಟಪಡಿಸಿದರು.
ನಗರ ಹೊರವಲಯದಲ್ಲಿ ಇರುವ ಇಸ್ರೋ ಸಂಸ್ಥೆಗೆ ಸೇರಿದ ಐಡಿಎಸ್ಎನ್ ಕೇಂದ್ರದ ಬಳಿ ಇಬ್ಬರು ಅಪರಿಚಿತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ಮಂಗಳವಾರ ನಸುಕಿನಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದಾಗ ಅಪರಿಚಿತರಿಬ್ಬರು ಕತ್ತಲಿನಲ್ಲಿ ಪರಾರಿಯಾಗಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ ಅವರು ಸಣ್ಣ ಪಿಸ್ತೂಲಿನಿಂದ ಭದ್ರತಾ ಸಿಬ್ಬಂದಿಯತ್ತ ಗುಂಡು ಹಾರಿಸಿದ್ದಾರೆ. ಈ ಘಟನೆ ಮಧ್ಯರಾತ್ರಿ 3.20 ರಿಂದ 4 ಗಂಟೆ ಸಮಯದಲ್ಲಿ ನಡೆದಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.
ಭಯೋತ್ಪಾದಕ ಕೃತ್ಯ ಅಲ್ಲ: ಇಸ್ರೋ ಕೇಂದ್ರದ ಮೇಲೆ ಭಯೋತ್ಪಾದಕರ ದಾಳಿ ನಡೆದಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಭಾನುವಾರ ಸ್ಪಷ್ಟಪಡಿಸಿದ್ದಾರೆ. ನಗರದ ಹೊರವಲಯದ ಬ್ಯಾಲಾಳುವಿನಲ್ಲಿ ಇರುವ ಇಸ್ರೋದ ಇಂಡಿಯನ್ ಡೀಪ್ ಸ್ಪೇಸ್ ನೆಟ್ವರ್ಕ್ (ಐಡಿಎಸ್ಎನ್) ಕೇಂದ್ರದ ಮೇಲೆ ಭಾನುವಾರ ಬೆಳಗಿನ ಜಾವ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಗುಂಡು ಹಾರಿಸಿದರು ಎಂದು ಅಲ್ಲಿನ ಕೇಂದ್ರ ಕೈಗಾರಿಕಾ ಭದ್ರತಾ ಸಿಬ್ಬಂದಿ (ಸಿಐಎಸ್ ಎಫ್) ಮಾಡಿರುವ ಆರೋಪ ಕುರಿತಂತೆ ಎಡಿಜಿಪಿ ಎ.ಆರ್. ಇನ್ಫೆಂಟ್ ಸ್ಪಷ್ಟನೆ ನೀಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications