ಹೆತ್ತ ಮಗನಿಗೆ ಪುನರ್ಜನ್ಮ ನೀಡಿದ ಮಹಾತಾಯಿ

ಮಾತೃಪ್ರೇಮವನ್ನು ಗೆದ್ದಿರುವ ಬಡಶಿಕ್ಷಕ ರಮೇಶ್ರ ಆಸ್ಪತ್ರೆಯ ಚಿಕಿತ್ಸೆ ಭರಿಸಲು ಶಿಕ್ಷಕ ಮಿತ್ರರು ಕೂಡ ಲಕ್ಷಾಂತರ ರೂಪಾಯಿಯ ಆರ್ಥಿಕ ಸಹಾಯವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದಲ್ಲಿ ಜಿ.ಕೆ.ರಮೇಶ್ ಬಡತನದಲ್ಲೇ ಬೆಳೆದು ಬದುಕಿನ ಬಂಡಿ ತಳ್ಳಲು ಶಾಲಾ ಶಿಕ್ಷಕ ವೃತ್ತಿಯನ್ನ ಆರಿಸಿಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಡಮಾಸ್ತರು ರಮೇಶ್ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗಲಿಲ್ಲ.
ಅಂತಿಮವಾಗಿ ಬೆಂಗಳೂರಿನ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಮೇಶ್ಗೆ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆಯನ್ನು ಮಾತ್ರ ನೀಡಿದ್ದಾರೆ. ಆದರೆ ಮೂತ್ರಪಿಂಡವನ್ನು ದಾನ ಮಾಡಲು ಯಾರೂ ಮುಂದೆ ಬರದ ವಿಷಯ ತಿಳಿದ ರಮೇಶ್ರ ತಾಯಿ ಪಾರ್ವತಮ್ಮನವರು ತನ್ನ ಮಗನಿಗೆ ತಾವೇ ಒಂದು ಮೂತ್ರಪಿಂಡ ದಾನ ಮಾಡುವ ತೀರ್ಮಾನ ಮಾಡಿದ್ದಾರೆ.
ಒಂಬತ್ತು ತಿಂಗಳು ಹೊತ್ತು ಹೆತ್ತು ಸಾಕಿ ಸಲುಹಿದ ಮಗ ಸಾವನ್ನು ಗೆದ್ದು ಮೊದಲಿನಂತಾಗಲಿ ಎಂಬ ಮಾತೃಹೃದಯ ತನಗೆ ಮೂತ್ರಪಿಂಡ ಕಸಿ ಮಾಡಲು ಮೂತ್ರಪಿಂಡ ದಾನ ಮಾಡಲು ಮುಂದಾಗಿರುವುದು ಪುನರ್ಜನ್ಮ ನೀಡಿದಂತಾಗಿದೆ ಎಂಬುದು ರಮೇಶ್ ಭಾವುಕರಾಗಿ ತಾಯಿಯ ಔದಾರ್ಯತೆ ಬಗ್ಗೆ ಹೇಳಿಕೊಂಡರು.
ರಮೇಶ್ರಿಗೆ ತಾಯಿ ಪಾರ್ವತಮ್ಮನವರು ಮೂತ್ರಪಿಂಡ ದಾನಮಾಡುತ್ತಿರುವುದನ್ನು ಬಡಮೇಷ್ಟ್ರು ರಮೇಶ್ರ ಸಹೋದ್ಯೋಗಿಗಳು ಕೂಡ ಶ್ಲಾಘಿಸಿದ್ದಾರೆ. ರಮೇಶ್ರ ಮೂತ್ರಪಿಂಡ ಕಸಿಮಾಡಲು ಸುಮಾರು 5 ಲಕ್ಷಕ್ಕೂ ಹೆಚ್ಚು ಹಣ ಹೊಂದಿಸಬೇಕಾದ ಅವಶ್ಯಕತೆಯಿರುವುದರಿಂದ ಸಾಧ್ಯವಾಗುವಷ್ಟು ಹಣವನ್ನು ನೌಕರರಿಂದ ಸಂಗ್ರಹಿಸಿ ಕೊಡಲಾಗುವುದೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮರಿದೇವರು ಹೇಳಿದ್ದಾರೆ.
ಬಡಶಿಕ್ಷಕ ರಮೇಶ್ ಅಷ್ಟೇನೂ ಸ್ಥಿತಿವಂತನಾಗಿರದೆ ತಿಂಗಳ ಸಂಬಳವನ್ನೇ ಅವಲಂಬಿಸಿದ್ದಾರೆ. ಆದ್ದರಿಂದ ಶಿಕ್ಷಕ ರಮೇಶ್ರ ಸಹೋದ್ಯೋಗಿಗಳು, ಪ್ರೌಢಶಾಲಾ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘದವರು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ರಮೇಶ್ರ ಶಸ್ತ್ರಚಿಕಿತ್ಸೆಗೆ ಉದಾರವಾಗಿ ನೀಡಿದ್ದಾರೆ. ರಮೇಶ್ ಮತ್ತು ತಾಯಿ ಪಾರ್ವತಮ್ಮನವರ ಮಾತೃವಾತ್ಸಲ್ಯದ ಅಂತಃಕರಣ ಮಿಡಿಯುವ ಮಾನವೀಯ ಕ್ಷಣಕ್ಕೆ ಸಹೋದ್ಯೋಗಿಗಳಾಗಿರುವ ನಾವುಗಳು ಭಾಗಿಯಾಗುತ್ತಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಪ್ರೌಢಶಾಲಾಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್ ಹೇಳಿದ್ದಾರೆ.
ಸಂಕಷ್ಟದಲ್ಲಿರುವ ಬಡಮೇಷ್ಟ್ರು ರಮೇಶ್ ಮಾತೃವಾತ್ಸಲ್ಯದಿಂದ ಮತ್ತೆ ಗುಣಮುಖರಾಗಿ ಮೊದಲಿನಂತಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ. ಸಂಕಷ್ಟದಲ್ಲಿರುವ ಬಡಮೇಷ್ಟ್ರು ರಮೇಶ್ರ ಮೂತ್ರಪಿಂಡ ಕಸಿ ಚಿಕಿತ್ಸೆಗೆ ಸಹಾಯ ಹಸ್ತ ಚಾಚುವವರು 99644 74189 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications