ಹೆತ್ತ ಮಗನಿಗೆ ಪುನರ್ಜನ್ಮ ನೀಡಿದ ಮಹಾತಾಯಿ

ಮಾತೃಪ್ರೇಮವನ್ನು ಗೆದ್ದಿರುವ ಬಡಶಿಕ್ಷಕ ರಮೇಶ್ರ ಆಸ್ಪತ್ರೆಯ ಚಿಕಿತ್ಸೆ ಭರಿಸಲು ಶಿಕ್ಷಕ ಮಿತ್ರರು ಕೂಡ ಲಕ್ಷಾಂತರ ರೂಪಾಯಿಯ ಆರ್ಥಿಕ ಸಹಾಯವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದಲ್ಲಿ ಜಿ.ಕೆ.ರಮೇಶ್ ಬಡತನದಲ್ಲೇ ಬೆಳೆದು ಬದುಕಿನ ಬಂಡಿ ತಳ್ಳಲು ಶಾಲಾ ಶಿಕ್ಷಕ ವೃತ್ತಿಯನ್ನ ಆರಿಸಿಕೊಂಡಿದ್ದಾರೆ. ಕಳೆದೊಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಡಮಾಸ್ತರು ರಮೇಶ್ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗಲಿಲ್ಲ.
ಅಂತಿಮವಾಗಿ ಬೆಂಗಳೂರಿನ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಮೇಶ್ಗೆ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದರಿಂದ ಪ್ರಾಥಮಿಕ ಚಿಕಿತ್ಸೆಯನ್ನು ಮಾತ್ರ ನೀಡಿದ್ದಾರೆ. ಆದರೆ ಮೂತ್ರಪಿಂಡವನ್ನು ದಾನ ಮಾಡಲು ಯಾರೂ ಮುಂದೆ ಬರದ ವಿಷಯ ತಿಳಿದ ರಮೇಶ್ರ ತಾಯಿ ಪಾರ್ವತಮ್ಮನವರು ತನ್ನ ಮಗನಿಗೆ ತಾವೇ ಒಂದು ಮೂತ್ರಪಿಂಡ ದಾನ ಮಾಡುವ ತೀರ್ಮಾನ ಮಾಡಿದ್ದಾರೆ.
ಒಂಬತ್ತು ತಿಂಗಳು ಹೊತ್ತು ಹೆತ್ತು ಸಾಕಿ ಸಲುಹಿದ ಮಗ ಸಾವನ್ನು ಗೆದ್ದು ಮೊದಲಿನಂತಾಗಲಿ ಎಂಬ ಮಾತೃಹೃದಯ ತನಗೆ ಮೂತ್ರಪಿಂಡ ಕಸಿ ಮಾಡಲು ಮೂತ್ರಪಿಂಡ ದಾನ ಮಾಡಲು ಮುಂದಾಗಿರುವುದು ಪುನರ್ಜನ್ಮ ನೀಡಿದಂತಾಗಿದೆ ಎಂಬುದು ರಮೇಶ್ ಭಾವುಕರಾಗಿ ತಾಯಿಯ ಔದಾರ್ಯತೆ ಬಗ್ಗೆ ಹೇಳಿಕೊಂಡರು.
ರಮೇಶ್ರಿಗೆ ತಾಯಿ ಪಾರ್ವತಮ್ಮನವರು ಮೂತ್ರಪಿಂಡ ದಾನಮಾಡುತ್ತಿರುವುದನ್ನು ಬಡಮೇಷ್ಟ್ರು ರಮೇಶ್ರ ಸಹೋದ್ಯೋಗಿಗಳು ಕೂಡ ಶ್ಲಾಘಿಸಿದ್ದಾರೆ. ರಮೇಶ್ರ ಮೂತ್ರಪಿಂಡ ಕಸಿಮಾಡಲು ಸುಮಾರು 5 ಲಕ್ಷಕ್ಕೂ ಹೆಚ್ಚು ಹಣ ಹೊಂದಿಸಬೇಕಾದ ಅವಶ್ಯಕತೆಯಿರುವುದರಿಂದ ಸಾಧ್ಯವಾಗುವಷ್ಟು ಹಣವನ್ನು ನೌಕರರಿಂದ ಸಂಗ್ರಹಿಸಿ ಕೊಡಲಾಗುವುದೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮರಿದೇವರು ಹೇಳಿದ್ದಾರೆ.
ಬಡಶಿಕ್ಷಕ ರಮೇಶ್ ಅಷ್ಟೇನೂ ಸ್ಥಿತಿವಂತನಾಗಿರದೆ ತಿಂಗಳ ಸಂಬಳವನ್ನೇ ಅವಲಂಬಿಸಿದ್ದಾರೆ. ಆದ್ದರಿಂದ ಶಿಕ್ಷಕ ರಮೇಶ್ರ ಸಹೋದ್ಯೋಗಿಗಳು, ಪ್ರೌಢಶಾಲಾ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘದವರು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ರಮೇಶ್ರ ಶಸ್ತ್ರಚಿಕಿತ್ಸೆಗೆ ಉದಾರವಾಗಿ ನೀಡಿದ್ದಾರೆ. ರಮೇಶ್ ಮತ್ತು ತಾಯಿ ಪಾರ್ವತಮ್ಮನವರ ಮಾತೃವಾತ್ಸಲ್ಯದ ಅಂತಃಕರಣ ಮಿಡಿಯುವ ಮಾನವೀಯ ಕ್ಷಣಕ್ಕೆ ಸಹೋದ್ಯೋಗಿಗಳಾಗಿರುವ ನಾವುಗಳು ಭಾಗಿಯಾಗುತ್ತಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಪ್ರೌಢಶಾಲಾಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ್ ಹೇಳಿದ್ದಾರೆ.
ಸಂಕಷ್ಟದಲ್ಲಿರುವ ಬಡಮೇಷ್ಟ್ರು ರಮೇಶ್ ಮಾತೃವಾತ್ಸಲ್ಯದಿಂದ ಮತ್ತೆ ಗುಣಮುಖರಾಗಿ ಮೊದಲಿನಂತಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ. ಸಂಕಷ್ಟದಲ್ಲಿರುವ ಬಡಮೇಷ್ಟ್ರು ರಮೇಶ್ರ ಮೂತ್ರಪಿಂಡ ಕಸಿ ಚಿಕಿತ್ಸೆಗೆ ಸಹಾಯ ಹಸ್ತ ಚಾಚುವವರು 99644 74189 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications