ಪೇಚಿಗೆ ಸಿಲುಕಿದ ಮರಾಠಿವಾದಿ ರಾಜ್ ಠಾಕ್ರೆ

ಮುಂಬೈ ಎನ್ನುವ ಬದಲು ಬಾಂಬೆ ಎಂದು ಹೇಳಿ ಹಲವು ಬಾರಿ ಕ್ಷಮೆಯಾಚಿಸಿದ್ದ ರಾಜ್ ಠಾಕ್ರೆ, ಇತ್ತೀಚೆಗೆ ಛತ್ರಪತಿ ಶಿವಾಜಿ ಟರ್ಮಿನಸ್(CST) ಎನ್ನುವ ಬದಲು ವಿಕ್ಟೋರಿಯಾ ಟರ್ಮಿನಸ್ (VT) ಎಂದು ತಮ್ಮ ಭಾಷಣದಲ್ಲಿ ಪದೇ ಪದೇ ಹೇಳಿ ಪೇಚಿಗೆ ಸಿಲುಕಿದ್ದಾರೆ.ರಾಜ್ ಠಾಕ್ರೆ ಅವರ ಈ ಭಾಷಣವನ್ನು ಆಲಿಸಿರುವ ಮಾಜಿ ಸಚಿವ ನವಾಬ್ ಮಲ್ಲಿಕ್ ,'ಶಿವಾಜಿ ಟರ್ಮಿನಸ್ ಮರೆತಿರುವ ರಾಜ್ ಇತರರಿಗೆ ಬುದ್ಧಿವಾದ ಹೇಳುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದಿದ್ದಾರೆ.
ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ತಮ್ಮಕಾಲೇಜು ದಿನಗಳನ್ನು ನೆನಪಿಸಿಕೊಂಡ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ ಎಸ್ ) ಮುಖಂಡ ಠಾಕ್ರೆ, ಶಿವಾಜಿ ಟರ್ಮಿನಸ್ ನಲ್ಲಿ ತಮ್ಮ ನೆಚ್ಚಿನ ತಾಣ ಎನ್ನುವ ಬದಲು ವಿಕ್ಟೋರಿಯಾ ಟರ್ಮಿನಸ್ ಎಂದಿದ್ದಾರೆ. ತಾಂತ್ರಿಕವಾಗಿ ಠಾಕ್ರೆ ಮಾತನ್ನು ಒಪ್ಪಬಹುದಾದರೂ, 1996 ರಲ್ಲೇ ವಿಕ್ಟೋರಿಯಾ ಟರ್ಮಿನಸ್ ಅನ್ನು ಛತ್ರಪತಿ ಶಿವಾಜಿ ಟರ್ಮಿನಸ್ ಎಂದು ಮರು ನಾಮಕರಣ ಮಾಡಲಾಗಿದೆ. ಅಲ್ಲದೆ ಮರಾಠಿವಾದಿ ಠಾಕ್ರೆ ಬಾಯಲ್ಲಿ ಯಾಕೆ ಈ ರೀತಿ ವಿಕ್ಟೋರಿಯಾ ಹೆಸರು ಉಚ್ಚಾರಯಾಯ್ತು ಎಂದು ಅವರ ಅಭಿಮಾನಿಗಳು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications