ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ
ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸದಸ್ಯರು ವಿಧೇಯಕದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧೇಯಕದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಸುಮಾರು ನಾಲ್ಕು ಗಂಟೆಗಳಿಗೂ ಅಧಿಕ ಕಾಲ ವಿಧಾನಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ ಗೋಹತ್ಯೆ ನಿಷೇಧ ವಿಧೇಯಕದ ಬಗ್ಗೆ ಕಿಡಿಕಾರಿದರು.
ಈ ವಿಧೇಯಕ ಇನ್ನೂ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ. ಮುಂದಿನ ವಿಧಾನಮಂಡಲ ಅಧಿವೇಶನದ ವೇಳೆ ಪರಿಷತ್ತಿನಲ್ಲಿ ಅಂಗೀಕಾರವಾದ ಬಳಿಕ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗುತ್ತದೆ. ಕರ್ನಾಟಕದಲ್ಲಿನ ಪಶುಸಂಪತ್ತನ್ನು ಸಂರಕ್ಷಿಸಲು ಈ ವಿಧೇಯಕವನ್ನು ತರುತ್ತಿರುವುದಾಗಿ ಯಡಿಯೂರಪ್ಪ ಈ ಹಿಂದೆ ತಿಳಿಸಿದ್ದರು.
Comments
Story first published: Saturday, March 20, 2010, 14:46 [IST]