ಬಳ್ಳಾರಿ : ಮಾ.22ರಂದು ಸಿದ್ದಗಂಗಾಶ್ರೀ ಗುರುವಂದನೆ

ಸಂಗನಬಸವ ಮಹಾಸ್ವಾಮಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪದವಿಪೂರ್ವ ವಸತಿ ಮಹಾವಿದ್ಯಾಲಯದ ಶಂಕುಸ್ಥಾಪನೆ, ವೀರಶೈವ ಮಹಾವಿದ್ಯಾಲಯದ ಮಹಿಳಾ ವಸತಿ ನಿಲಯದ ಉದ್ಘಾಟನೆ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ನಡೆಯಲಿವೆ.
ಮಾನನಷ್ಟ ಮೊಕದ್ದಮೆ : ಬಳ್ಳಾರಿಯ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಓಎಂಸಿ)ನ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸರೆಡ್ಡಿ ಕೆಲ ಗಣಿ ಮಾಲೀಕರು, ರಾಜಕಾರಣಿಗಳು ಮತ್ತು ಕೆಲ ಮಾಧ್ಯಮಗಳ ಮೇಲೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು ಜೂನ್ 28ರಂದು ವಿಚಾರಣೆ ನಡೆಯಲಿದೆ.
ಹೊಸಪೇಟೆಯ ಎಂಎಸ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಬಲ್ಡೋಟ, ಬಿಐಓಪಿ ವ್ಯವಸ್ಥಾಪಕ ನಿರ್ದೇಶಕ ಎಸ್.ಕೆ. ಮೋದಿ, ತುಮಟಿ ಮೈನ್ಸ್ ಮಾಲೀಕರಾದ ಟಪಾಲ್ ಗಣೇಶ್ ಮತ್ತು ಟಿ. ನಾರಾಯಣರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಕನ್ನಡ, ಆಂಗ್ಲ ಪತ್ರಿಕೆಗಳ ಮುದ್ರಕರು, ಪ್ರಕಾಶಕರು, ಸಂಪಾದಕರು ಮತ್ತು ವರದಿಗಾರರ ಮೇಲೆ ಅವರು ಮೊಕದ್ದಮೆ ದಾಖಲಿಸಿದ್ದಾರೆ. ಇವರ ವಕೀಲ ಪಟೇಲ್ ಸಿದ್ಧಾರೆಡ್ಡಿ ಅವರು ಈ ಮಾಹಿತಿ ನೀಡಿದ್ದಾರೆ.
ಗಣಿಯ ಸಿಬ್ಬಂದಿ ವಿರೋಧ : ಬಳ್ಳಾರಿಯ ಎಂಬಿಟಿ ಗಣಿಯ ಗಡಿ ಒತ್ತುವರಿ ಪರಿಶೀಲನೆಗಾಗಿ ಸ್ಥಳಕ್ಕೆ ಆಗಮಿಸಿದ್ದ ಐಬಿಎಂ ಅಧಿಕಾರಿಗಳು ಗಣಿ ಪ್ರವೇಶ ಮಾಡಲು ಗಣಿಯ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಸ್ಥಳದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಐಬಿಎಂನ ಬೆಂಗಳೂರು ಕಚೇರಿಯ ಅಧಿಕಾರಿ ಜಲನಾಪುರಕರ್ ನೇತೃತ್ವದಲ್ಲಿದ್ದ ತಂಡವು ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಎಂಬಿಟಿ ಗಣಿ ಪ್ರದೇಶಕ್ಕೆ ಹೋಗಲು ಯತ್ನಿಸಿತು. ಆಗ, ಎಂಬಿಟಿ ಸಿಬ್ಬಂದಿಯು ಅಧಿಕಾರಿಗಳ ತಂಡ ಗಣಿ ಪ್ರವೇಶಕ್ಕೆ ತೀವ್ರ ವಿರೋಧ ತೋರಿತು. ಆಗ, ಅಧಿಕಾರಿಗಳು ಮತ್ತು ಗಣಿ ಸಿಬ್ಬಂದಿಯ ಮಧ್ಯೆ ತೀವ್ರ ವಾದ ವಿವಾದ ನಡೆದ ನಂತರ ಕೊನೆಯದಾಗಿ ಅಧಿಕಾರಿಗಳು ಗಣಿ ಪ್ರವೇಶಿಸಿದರು. ಗಡಿ ಒತ್ತುವರಿ ಆರೋಪ ಮಾಡಿರುವ ಟಪಾಲ್ ಗಣೇಶ್ ಮತ್ತು ಟಪಾಲ್ ಏಕಾಂಬರಂ ಅವರಿಂದ ಗಣಿ ಪ್ರವೇಶಕ್ಕೆ ವಿರೋಧ ವ್ಯಕ್ತವಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications