ಬಳ್ಳಾರಿ : ಮಾ.22ರಂದು ಸಿದ್ದಗಂಗಾಶ್ರೀ ಗುರುವಂದನೆ

ಸಂಗನಬಸವ ಮಹಾಸ್ವಾಮಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪದವಿಪೂರ್ವ ವಸತಿ ಮಹಾವಿದ್ಯಾಲಯದ ಶಂಕುಸ್ಥಾಪನೆ, ವೀರಶೈವ ಮಹಾವಿದ್ಯಾಲಯದ ಮಹಿಳಾ ವಸತಿ ನಿಲಯದ ಉದ್ಘಾಟನೆ ಕಾರ್ಯಕ್ರಮಗಳು ಕೂಡ ಈ ಸಂದರ್ಭದಲ್ಲಿ ನಡೆಯಲಿವೆ.
ಮಾನನಷ್ಟ ಮೊಕದ್ದಮೆ : ಬಳ್ಳಾರಿಯ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಓಎಂಸಿ)ನ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸರೆಡ್ಡಿ ಕೆಲ ಗಣಿ ಮಾಲೀಕರು, ರಾಜಕಾರಣಿಗಳು ಮತ್ತು ಕೆಲ ಮಾಧ್ಯಮಗಳ ಮೇಲೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು ಜೂನ್ 28ರಂದು ವಿಚಾರಣೆ ನಡೆಯಲಿದೆ.
ಹೊಸಪೇಟೆಯ ಎಂಎಸ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಬಲ್ಡೋಟ, ಬಿಐಓಪಿ ವ್ಯವಸ್ಥಾಪಕ ನಿರ್ದೇಶಕ ಎಸ್.ಕೆ. ಮೋದಿ, ತುಮಟಿ ಮೈನ್ಸ್ ಮಾಲೀಕರಾದ ಟಪಾಲ್ ಗಣೇಶ್ ಮತ್ತು ಟಿ. ನಾರಾಯಣರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಕನ್ನಡ, ಆಂಗ್ಲ ಪತ್ರಿಕೆಗಳ ಮುದ್ರಕರು, ಪ್ರಕಾಶಕರು, ಸಂಪಾದಕರು ಮತ್ತು ವರದಿಗಾರರ ಮೇಲೆ ಅವರು ಮೊಕದ್ದಮೆ ದಾಖಲಿಸಿದ್ದಾರೆ. ಇವರ ವಕೀಲ ಪಟೇಲ್ ಸಿದ್ಧಾರೆಡ್ಡಿ ಅವರು ಈ ಮಾಹಿತಿ ನೀಡಿದ್ದಾರೆ.
ಗಣಿಯ ಸಿಬ್ಬಂದಿ ವಿರೋಧ : ಬಳ್ಳಾರಿಯ ಎಂಬಿಟಿ ಗಣಿಯ ಗಡಿ ಒತ್ತುವರಿ ಪರಿಶೀಲನೆಗಾಗಿ ಸ್ಥಳಕ್ಕೆ ಆಗಮಿಸಿದ್ದ ಐಬಿಎಂ ಅಧಿಕಾರಿಗಳು ಗಣಿ ಪ್ರವೇಶ ಮಾಡಲು ಗಣಿಯ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣ ಸ್ಥಳದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಐಬಿಎಂನ ಬೆಂಗಳೂರು ಕಚೇರಿಯ ಅಧಿಕಾರಿ ಜಲನಾಪುರಕರ್ ನೇತೃತ್ವದಲ್ಲಿದ್ದ ತಂಡವು ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಎಂಬಿಟಿ ಗಣಿ ಪ್ರದೇಶಕ್ಕೆ ಹೋಗಲು ಯತ್ನಿಸಿತು. ಆಗ, ಎಂಬಿಟಿ ಸಿಬ್ಬಂದಿಯು ಅಧಿಕಾರಿಗಳ ತಂಡ ಗಣಿ ಪ್ರವೇಶಕ್ಕೆ ತೀವ್ರ ವಿರೋಧ ತೋರಿತು. ಆಗ, ಅಧಿಕಾರಿಗಳು ಮತ್ತು ಗಣಿ ಸಿಬ್ಬಂದಿಯ ಮಧ್ಯೆ ತೀವ್ರ ವಾದ ವಿವಾದ ನಡೆದ ನಂತರ ಕೊನೆಯದಾಗಿ ಅಧಿಕಾರಿಗಳು ಗಣಿ ಪ್ರವೇಶಿಸಿದರು. ಗಡಿ ಒತ್ತುವರಿ ಆರೋಪ ಮಾಡಿರುವ ಟಪಾಲ್ ಗಣೇಶ್ ಮತ್ತು ಟಪಾಲ್ ಏಕಾಂಬರಂ ಅವರಿಂದ ಗಣಿ ಪ್ರವೇಶಕ್ಕೆ ವಿರೋಧ ವ್ಯಕ್ತವಾಯಿತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications