ವಿನಿವಿಂಕ್ ಶಾಸ್ತ್ರಿ ಜಮೀನು ಹರಾಜಿಗೆ ಸಿದ್ಧ

ಆರ್ಥಿಕ ಸಂಸ್ಥೆಗಳಲ್ಲಿ ಬಂಡವಾಳ ಹೂಡಿಕೆದಾರರಿಗೆ ಭದ್ರತೆ ಒದಗಿಸುವ ಕಾನೂನಿ(Karnataka Protection of Interest of Depositors in Financial Institutions Act, 2004)ನಡಿ ವಿನಿವಿಂಕ್ ಸೌಹಾರ್ದ ಲಿಮಿಟೆಡ್ ನ ಕೆಎನ್ ಶ್ರೀನಿವಾಸ ಶಾಸ್ತ್ರಿ ಅವರ ಕೆಲವು ಆಸ್ತಿಗಳನ್ನು ಸರ್ಕಾರಬಹಿರಂಗವಾಗಿ ಹರಾಜು ಮಾಡಿ ಹೂಡಿಕೆದಾರರಿಗೆ ಹಣ ಒದಗಿಸುತ್ತಿದೆ .
ಗುರುವಾರ ಬೆಳಗ್ಗೆ 10.30 ಕ್ಕೆ ಸರಿಯಾಗಿ ಹೊಸಕೋಟೆಯ ತಾಲೂಕು ಕಚೇರಿ ಆವರಣದಲ್ಲಿ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಸೂಲಿಬೆಲೆ ಹೋಬಳಿಯ ಏಕರಾಜಪುರಪುರದಲ್ಲಿರುವ 26 ಎಕರೆ ಹಾಗೂ ಜಡಿಗನಹಳ್ಳಿ ಹೋಬಳಿಯ ಮುಗಬಾಲ ಗ್ರಾಮದಲ್ಲಿರುವ 17 ಗುಂಟೆ ವಿಸ್ತೀರ್ಣದ ಭೂಮಿಯನ್ನು ಹರಾಜುಮಾಡಲಾಗುತ್ತಿದೆ. ಹರಾಜಾಗುತ್ತಿರುವ ಎರಡೂ ಭೂಭಾಗ ಹೊಸಕೋಟೆ ತಾಲೂಕಿನಲ್ಲಿದೆ.
ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಡ್ ಮಾಡಲು ಇಚ್ಛಿಸುವವರು ಮಾ.24ರೊಳಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಹೋಗಿ ನೋಂದಾಯಿಸಿಕೊಳ್ಳಬಹುದು.
ಉಪ ಆಯುಕ್ತರು, ದೊಡ್ಡಬಳ್ಳಾಪುರ ಉಪಶಾಖೆ
ಕಚೇರಿ ವಿಳಾಸ: ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಟವರ್ಸ್, ಅಂಬೇಡ್ಕರ್ ಬೀದಿ, ಬೆಂಗಳೂರು.
ಕೇಸ್ ಹಿಸ್ಟರಿ: ಡಿ.30,2009 ರ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ವಿನಿವಿಂಕ್ ಸಂಸ್ಥೆ ಆಸ್ತಿ ವಶಕ್ಕೆ ತೆಗೆದುಕೊಂಡಿತು. ಇದಕ್ಕೆ ಜ.30, 2010 ರಂದು ಬೆಂಗಳೂರು ಗ್ರಾಮಾಂತರ ವಿಶೇಷ ನ್ಯಾಯಾಲಯ ಅನುಮೋದನೆ ನೀಡಿ, ಫೆ.6,2010ರಂದು ಸೇಲ್ ವಾರಂಟ್ ವಿತರಣೆ ಮಾಡಿತ್ತು. ಹೈಕೋರ್ಟ್ ಗೆ ವಿನಿವಿಂಕ್ ಶಾಸ್ತಿ ನೀಡಿರುವ ಹೇಳಿಕೆಯನ್ವಯ ಸುಮಾರು 20,184 ಹೂಡಿಕೆದಾರರು ಸುಮಾರು 203 ಕೋಟಿ ರೂಗಳನ್ನು ವಿನಿವಿಂಕ್ ಸೌಹಾರ್ದ ಲಿ.ನಲ್ಲಿ ಹೂಡಿಕೆ ಮಾಡಿದ್ದರು.ವಿನಿವಿಂಕ್ ಸಂಸ್ಥೆ ಬೆಂಗಳೂರು ಹಾಗೂ ಸುತ್ತಮುತ್ತ 49 ಕ್ಕೂ ಅಧಿಕ ನಿವೇಶನಗಳನ್ನು ಹೊಂದಿದ್ದು, ಅದರಲ್ಲಿ ಈಗ ಹರಾಜಾಗುತ್ತಿರುವ ಭೂಭಾಗವೂ ಸೇರಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications