ವಿನಿವಿಂಕ್ ಶಾಸ್ತ್ರಿ ಜಮೀನು ಹರಾಜಿಗೆ ಸಿದ್ಧ

ಆರ್ಥಿಕ ಸಂಸ್ಥೆಗಳಲ್ಲಿ ಬಂಡವಾಳ ಹೂಡಿಕೆದಾರರಿಗೆ ಭದ್ರತೆ ಒದಗಿಸುವ ಕಾನೂನಿ(Karnataka Protection of Interest of Depositors in Financial Institutions Act, 2004)ನಡಿ ವಿನಿವಿಂಕ್ ಸೌಹಾರ್ದ ಲಿಮಿಟೆಡ್ ನ ಕೆಎನ್ ಶ್ರೀನಿವಾಸ ಶಾಸ್ತ್ರಿ ಅವರ ಕೆಲವು ಆಸ್ತಿಗಳನ್ನು ಸರ್ಕಾರಬಹಿರಂಗವಾಗಿ ಹರಾಜು ಮಾಡಿ ಹೂಡಿಕೆದಾರರಿಗೆ ಹಣ ಒದಗಿಸುತ್ತಿದೆ .
ಗುರುವಾರ ಬೆಳಗ್ಗೆ 10.30 ಕ್ಕೆ ಸರಿಯಾಗಿ ಹೊಸಕೋಟೆಯ ತಾಲೂಕು ಕಚೇರಿ ಆವರಣದಲ್ಲಿ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಸೂಲಿಬೆಲೆ ಹೋಬಳಿಯ ಏಕರಾಜಪುರಪುರದಲ್ಲಿರುವ 26 ಎಕರೆ ಹಾಗೂ ಜಡಿಗನಹಳ್ಳಿ ಹೋಬಳಿಯ ಮುಗಬಾಲ ಗ್ರಾಮದಲ್ಲಿರುವ 17 ಗುಂಟೆ ವಿಸ್ತೀರ್ಣದ ಭೂಮಿಯನ್ನು ಹರಾಜುಮಾಡಲಾಗುತ್ತಿದೆ. ಹರಾಜಾಗುತ್ತಿರುವ ಎರಡೂ ಭೂಭಾಗ ಹೊಸಕೋಟೆ ತಾಲೂಕಿನಲ್ಲಿದೆ.
ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಬಿಡ್ ಮಾಡಲು ಇಚ್ಛಿಸುವವರು ಮಾ.24ರೊಳಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಹೋಗಿ ನೋಂದಾಯಿಸಿಕೊಳ್ಳಬಹುದು.
ಉಪ ಆಯುಕ್ತರು, ದೊಡ್ಡಬಳ್ಳಾಪುರ ಉಪಶಾಖೆ
ಕಚೇರಿ ವಿಳಾಸ: ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಟವರ್ಸ್, ಅಂಬೇಡ್ಕರ್ ಬೀದಿ, ಬೆಂಗಳೂರು.
ಕೇಸ್ ಹಿಸ್ಟರಿ: ಡಿ.30,2009 ರ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ವಿನಿವಿಂಕ್ ಸಂಸ್ಥೆ ಆಸ್ತಿ ವಶಕ್ಕೆ ತೆಗೆದುಕೊಂಡಿತು. ಇದಕ್ಕೆ ಜ.30, 2010 ರಂದು ಬೆಂಗಳೂರು ಗ್ರಾಮಾಂತರ ವಿಶೇಷ ನ್ಯಾಯಾಲಯ ಅನುಮೋದನೆ ನೀಡಿ, ಫೆ.6,2010ರಂದು ಸೇಲ್ ವಾರಂಟ್ ವಿತರಣೆ ಮಾಡಿತ್ತು. ಹೈಕೋರ್ಟ್ ಗೆ ವಿನಿವಿಂಕ್ ಶಾಸ್ತಿ ನೀಡಿರುವ ಹೇಳಿಕೆಯನ್ವಯ ಸುಮಾರು 20,184 ಹೂಡಿಕೆದಾರರು ಸುಮಾರು 203 ಕೋಟಿ ರೂಗಳನ್ನು ವಿನಿವಿಂಕ್ ಸೌಹಾರ್ದ ಲಿ.ನಲ್ಲಿ ಹೂಡಿಕೆ ಮಾಡಿದ್ದರು.ವಿನಿವಿಂಕ್ ಸಂಸ್ಥೆ ಬೆಂಗಳೂರು ಹಾಗೂ ಸುತ್ತಮುತ್ತ 49 ಕ್ಕೂ ಅಧಿಕ ನಿವೇಶನಗಳನ್ನು ಹೊಂದಿದ್ದು, ಅದರಲ್ಲಿ ಈಗ ಹರಾಜಾಗುತ್ತಿರುವ ಭೂಭಾಗವೂ ಸೇರಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications