ಮುಂಬೈನಲ್ಲಿ ಕುಲಾಲ ಉತ್ಸವ 2010

ವಾಣಿಜ್ಯ ನಗರಿ ಮುಂಬೈನಲ್ಲಿ ಬೃಹತ್ ಕುಲಾಲ ಉತ್ಸವಕ್ಕೆ ಭರದ ಸಿದ್ದತೆಗಳು ನಡೆದಿವೆ. ಏಪ್ರಿಲ್ 4ರಂದು ಮುಂಬೈನ ದಾದರ್ನಲ್ಲಿರುವ ಕಾಮ್ಗಾರ್ ಕ್ರೀಡಾ ಭನವದಲ್ಲಿ ಕುಲಾಲ ಉತ್ಸವ 2010' ಜರಗುತ್ತಿದೆ. ವಿಶೇಷವಾಗಿ ಮುಂಬೈನಲ್ಲಿ ನೆಲೆಸಿರುವ ಕುಲಾಲರು ಈ ಉತ್ಸವದ ಪ್ರಮುಖ ಆಕರ್ಷಣೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಯಲ್ಲಿರುವ ಕುಲಾಲ ಸಮುದಾಯದ ಪ್ರಮುಖರು ಆಹ್ವಾನಿತರಾಗಿ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸುಮಾರು ಆರು ಸಾವಿರ ಮಂದಿ ಸೇರಲಿರುವ ಈ ಸಮಾವೇಶಕ್ಕೆ ಭರದ ಸಿದ್ದತೆಗಳು ನಡೆದಿವೆ.
ಮಂಗಳೂರು ಕುಲಾಲ ಪ್ರತಿಷ್ಠಾನ ಇದರ ವತಿಯಿಂದ ಕುಲಾಲ ಸಂಘ ಮುಂಬೈ ಇದರ ಸಹಕಾರದಲ್ಲಿ ಹಮ್ಮಿಕೊಂಡಿರುವ ಈ ಉತ್ಸವ ದಿನಪೂರ್ತಿ ಜರಗಲಿದೆ ಎನ್ನುತ್ತಾರೆ ಕುಲಾಲ ಪ್ರತಿಷ್ಠಾನದ ಸಂಚಾಲಕರಲ್ಲಿ ಒಬ್ಬರಾದ ಬಿ.ದಿನೇಶ್ ಕುಲಾಲ್ ಮಲಾಡ್. ಕುಲಾಲ ಸಮಾಜ ಕೋಡೆ-ಇನಿ-ಎಲ್ಲೆ' ಎಂಬ ವಿಷಯದ ಕುರಿತು ವಿಚಾರ ಸಂಕಿರಣ, ಯುವಕರು ಮತ್ತು ಕುಲಾಲ ಸಮಾಜ' ವಿಚಾರ ವಿನಿಮಯ ಹೀಗೆ ವಿಭಿನ್ನ ನೆಲೆಯಲ್ಲಿ ಕುಲಾಲ ಸಮಾಜವನ್ನು ನೋಡುವ ಪ್ರಯತ್ನ ಆಗಲಿದೆ. ಕುಲಾಲ ಸಮಾಜದಲ್ಲಿ ಹುಟ್ಟಿದವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಯುವಪೀಳಿಗೆಗೆ ಸಾಧನೆ ಮಾಡಲು ಪ್ರೇರಣೆ ಕೊಡುವ ಪ್ರಯತ್ನ.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಸಹಿತ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ. ಈ ಉತ್ಸವದಲ್ಲಿ ಗಮನಿಸಬಹುದಾದ ಮತ್ತೊಂದು ವಿಶೇಷತೆಯೆಂದರೆ ಬೇರೆ ಬೇರೆ ಸಮಾಜದ ಗಣ್ಯರು ಅತಿಥಿಗಳಾಗಿ ಭಾಗವಹಿಸುತ್ತಿರುವುದು. ಯಾವುದೇ ಸಮುದಾಯದೊಳಗೆ ಸೌಹಾರ್ದತೆ ಇರಬೇಕು, ಈ ಮೂಲಕ ಎಲ್ಲಾ ಸಮುದಾಯಗಳು ಪರಸ್ಪರ ಕೊಡುಕೊಳ್ಳುವಿಕೆಯೊಂದಿಗೆ ಅಭ್ಯುದಯ ಹೊಂದಲು ಸಾಧ್ಯ ಎನ್ನುವ ಸಂದೇಶವನ್ನು ರವಾನಿಸುವಂತಿದೆ. ನಿಜಕ್ಕೂ ಈ ರೀತಿಯ ಪ್ರಯತ್ನಗಳು ಯಾವುದೇ ಸಮುದಾಯದಿಂದ ನಡೆದರೂ ಸ್ವಾಗತಾರ್ಹ.
ದಿನಪೂರ್ತಿ ನಡೆಯಲಿರುವ ಈ ಉತ್ಸವಕ್ಕೆ ಮೆರುಗು ಕೊಡಲು ಕುಲಾಲ ಸಮಾಜದ ಪ್ರತಿಭಾವಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕುಲಾಲ ಸಾಂಸ್ಕೃತಿಕ ವೈಭವದ ಅನಾವರಣವೂ ಇಲ್ಲಿ ನಡೆಯಲಿದೆ. ಅಂತೂ ವಾಣಿಜ್ಯ ನಗರಿ ಮುಂಬೈ ಕುಲಾಲ ಉತ್ಸವಕ್ಕೆ ಅಣಿಯಾಗಿದೆ. ದೂರದ ಮುಂಬೈಗೆ ಉದ್ಯೋಗ ಹರಸಿಕೊಂಡು ಹೋದವರು ತಾಯಿನೆಲದ ಬೇರುಗಳನ್ನು ಮರೆತಿಲ್ಲ ಎನ್ನುವುದಕ್ಕೆ ಈ ಐತಿಹಾಸಿಕ ಉತ್ಸವ ಸಾಕ್ಷಿಯಾಗಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications