ಮಕ್ಕಳಿಗೆ ಬ್ಯಾಂಕಿಂಗ್ ಜ್ಞಾನ ಅಗತ್ಯ: ಡಿ. ಸುಬ್ಬರಾವ್

ಅವರು ಸೋಮವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಲೆಕ್ಟ್ರಾನಿಕ್ ವರ್ಗಾವಣೆ ಯೋಜನೆ, ಆರ್ಥಿಕ ಸಾಕ್ಷರತೆಯನ್ನು ಸೇರ್ಪಡೆ ಮಾಡಿದ ಪರಿಷ್ಕೃತ ಶಾಲಾ ಪಠ್ಯ ಪುಸ್ತಗಳ ಬಿಡುಗಡೆ ಹಾಗೂ ಆರ್ಥಿಕ ಸಾಕ್ಷರತಾ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳು ಬಾಲ್ಯದಿಂದಲೇ ಉಳಿತಾಯ ಮನೋಭಾವವನ್ನು ಬೆಳೆಸಿಕೊಳ್ಳುವುದರಿಂದ ಆರ್ಥಿಕ ಅಭಿವೃದ್ಧಿಗೂ ನೆರವಾಗುತ್ತದೆ ಎಂದು ಅವರು ನುಡಿದರು.
ರಾಜ್ಯದಲ್ಲಿ ಬಿಡುಗಡೆ ಮಾಡಲಾದ ಆರ್ಥಿಕ ಸಾಕ್ಷರತೆಯನ್ನು ಸೇರ್ಪಡೆ ಮಾಡಿದ ಶಾಲಾ ಪಠ್ಯಪುಸ್ತಕಗಳ ಮೌಲ್ಯಮಾಪನ ಮಾಡುವಂತೆ ಅವರು ರಾಜ್ಯ ಶಿಕ್ಷಣ ಇಲಾಖೆಗೆ ಮನವಿ ಮಾಡಿದರು. ದೇಶದಲ್ಲಿ ಹಣಕಾಸು ಸೇರ್ಪಡೆಯಾಗದ 5.7 ಲಕ್ಷ ಗ್ರಾಮಗಳಿವೆ. ಈ ಗ್ರಾಮಗಳಲ್ಲಿ ಬ್ಯಾಂಕುಗಳ ಶಾಖೆಗಳಿಲ್ಲ. ಇಲ್ಲಿ ಶಾಖೆಗಳನ್ನು ತೆರೆದು, ಗ್ರಾಮಸ್ಥರು ಸುಲಭ ಖಾತೆಯನ್ನು ಪ್ರಾರಂಭಿಸುವ ಮೂಲಕ ಅವರ ಆರ್ಥಿಕ ಅಭಿವೃದ್ಧಿಗೆ ನೆರವಾಗುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಹಾಗೂ ಉದ್ಯೋಗ ಖಾತರಿ ಯೋಜನೆಗಳ ಹಣವನ್ನು ನೇರವಾಗಿ ಅವರ ಖಾತೆಗಳಿಗೇ ಜಮಾ ಮಾಡುವ ಮೂಲಕ ಅವರಿಗೆ ಅನುಕೂಲ ಕಲ್ಪಿಸಿಕೊಡಬಹುದು. ಕರ್ನಾಟಕ ರಾಜ್ಯದ 6 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ದೇಶದಾದ್ಯಂತ ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ರಿಸರ್ವ್ ಬ್ಯಾಂಕಿನ ಡೆಪ್ಯುಟಿ ಗವರ್ನರ್ಗಳಾದ ಶ್ಯಾಮಲಾ ಗೋಪಿನಾಥ್ ಹಾಗೂ ಉಷಾ ಥೋರಟ್, ರಾಜ್ಯದ ಅಭಿವೃದ್ಧಿ ಆಯುಕ್ತ ಸುಬೀರ್ ಹರಿಸಿಂಗ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆರ್.ಜಿ. ನಡದೂರ ಮತ್ತಿತರರು ಉಪಸ್ಥಿತರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications