ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಯೋಗದ ಕ್ರಮಕ್ಕೆ ಬಿಜೆಪಿ ಆಕ್ರೋಶ

By Mahesh
|
Google Oneindia Kannada News

KS Eshwarappa
ಬೆಂಗಳೂರು,ಮಾ.23: ಬಿಬಿಎಂಪಿ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹೇರಿರುವ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಕೆಎಸ್ ಈಶ್ವರಪ್ಪ, ಸಾರ್ವತ್ರಿಕ ಚುನಾವಣೆಗೂ ಇಲ್ಲದಷ್ಟು ನಿರ್ಬಂಧ ಹೇರಿರುವ ಆಯೋಗ ನೇರವಾಗಿ ಹಣ-ಹೆಂಡ ಹಂಚಿ ಎಂದು ಹೇಳಲು ಹೊರಟಿದೆ ಎಂದು ಲೇವಡಿ ಮಾಡಿದರು.

ಮತದಾನದ ದಿನಕ್ಕಿಂತ 48 ಗಂಟೆಗೂ ಮುನ್ನ ಸಾರ್ವಜನಿಕ ಸಭೆ,ಮತದಾರರಿಗೆ ಎಸ್‌ಎಂಎಸ್ ಸಂದೇಶ ರವಾನೆ,ಎಫ್‌ಎಂ ರೇಡಿಯೋ,ದೃಶ್ಯ ಮಾಧ್ಯಮಗಳ ಮೂಲಕ ಪ್ರಚಾರ,ಮತದಾರರಿಗೆ ವಿಡಿಯೋ ಕ್ಲಿಪ್ಪಿಂಗ್ಸ್ ಪ್ರದರ್ಶಿಸುವುದು,ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವಿಕೆಗೆ ನಿರ್ಬಂಧ ಹೇರಿರುವುದು ಹಾಗೂ ಹೋರ್ಡಿಂಗ್‌ಗಳನ್ನು ತೆರವುಗೊಳಿಸುವುದಾಗಿ ಹೇಳಿರುವ ಆಯೋಗದ ನಿರ್ಧಾರ ಸರಿಯಲ್ಲ. ಆಯೋಗ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X