ವಿದ್ಯಾರ್ಥಿಗಳೊಂದಿಗೆ ಆಪ್ತ ಸಮಾಲೋಚನೆಗೆ ಒತ್ತು

ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಭಟ್ಕಳ ತಾಲೂಕಾ ವೈದ್ಯಾಧಿಕಾರಿ ಡಾ. ಮಂಜುನಾಥ್ ಶೆಟ್ಟಿ, ಹದಿಹರೆಯಕ್ಕೆ ಬಂದವರು ಬಹಳಷ್ಟು ಸಮಸ್ಯೆಗಳಿಂದ ತೊಳಲಾಡುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಸೂಕ್ತವಾದ ಆಪ್ತ ಸಮಾಲೋಚನೆಯನ್ನು ಕೈಗೊಂಡರೆ ಅವರು ಅದರಿಂದ ಹೊರಬರಲು ಸಾಧ್ಯವಾಗಬಹುದು. ಹದೆಹರೆಯದವರು ಬಹುತೇಕವಾಗಿ ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳೇ ಆಗಿರುವುದರಿಂದ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಆಪ್ತ ಸಮಾಲೋಚನೆ ಕೈಗೊಂಡು ಅವರ ವಿಚಲಿತ ಮನಸನ್ನು ಗೊಂದಲಗಳಿಂದ ದೂರಮಾಡಬೇಕು ಎಂದರು.
ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಿಕ್ಷಕರಿಗೆ ತರಬೇತಿಯನ್ನು ನೀಡಿದ ಶಿರಾಲಿ ಹಿರಿಯ ಆರೋಗ್ಯ ಸಹಾಯಕ ಈರಯ್ಯ ಎನ್. ದೇವಾಡಿಗ ಅವರು, ಹದಿಹರೆಯದವರಲ್ಲಾಗುವ ಬದಲಾವಣೆ, ವೈಯಕ್ತಿಕ ಸ್ವಚ್ಛತೆ, ಜೀವನ ಕೌಶಲ್ಯ, ಹೆಣ್ಣು ಮಕ್ಕಳ ಸಮಸ್ಯೆ, ಗರ್ಭಧಾರಣೆ, ಪ್ರಸವಪೂರ್ವ ಆಪತ್ತು, ಗರ್ಭಧಾರಣೆಯನ್ನು ತಡೆಗಟ್ಟುವ ವಿಧಾನ ಮುಂತಾದ ಆರೋಗ್ಯ ವಿಷಯದ ಕುರಿತು ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಈ ದೇಶದಲ್ಲಿ ಪ್ರತಿವರ್ಷ ಒಂದು ಲಕ್ಷ ಮಹಿಳೆಯರು ತಾಯ್ತನದ ಸಮಸ್ಯೆಯಿಂದ ಸಾವನ್ನಪುತ್ತಿದ್ದು ಹುಟ್ಟುವ ಜೀವಂತ ಮಗುವಿನ ಪ್ರತಿ ಸಾವಿರಕ್ಕೆ 50 ಶಿಶುಗಳು ಮರಣವನ್ನಪ್ಪುತ್ತಿವೆ. ಇದನ್ನು ಸಂಪೂರ್ಣವಾಗಿ ಹತೋಟಿಗೆ ತರುವುದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಮುಖ್ಯ ಗುರಿಗಳಲ್ಲಿ ಒಂದಾಗಿದ್ದು, ಈ ಕುರಿತು ಸಮುದಾಯದಲ್ಲಿ ವ್ಯಾಪಕ ಅರಿವು ಮೂಡಿಸಿದಾಗ ಮಾತ್ರ ಇದು ಸಾಧ್ಯವಾಗಬಲ್ಲದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಹರಡುತ್ತಿರುವ ಸಾಂಕ್ರಮಿಕ ರೋಗಗಳನ್ನು ತಡೆಯುವುದು, ಕ್ಷಯ ರೋಗವನ್ನು ಹತೋಟಿಗೆ ತರುವುದು, ಹಾಗೂ ನಮ್ಮ ದಿನ ನಿತ್ಯದ ಜೀವನಶೈಲಿಗೆ ಸಂಬಂಧಿಸಿದಂತೆ ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾಗಿ ಎಂ.ಡಿ.ನಾಯ್ಕ, ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ರವಿರಾಜ್ ಕೆ.ಶೇಟ್, ಆಯುರ್ವೇದ ವೈದ್ಯ ಡಾ. ರೋಹಿಣಿ ನಾಯ್ಕ ಡಾ. ಪ್ರಕಾಶ ಕಾಮತ್ ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications