ಗಡಿ ಒತ್ತುವರಿ ಮಾಡಿದವರಿಗೆ ಶಿಕ್ಷೆ ಆಗಬೇಕು : ಪ್ರಕಾಶ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯುವ ನಿಟ್ಟಿನಲ್ಲಿ ನೆರೆಯ ರಾಜ್ಯದ ರೋಶಯ್ಯ ಅವರಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುಂದಾಗಬೇಕು. ಯಡಿಯೂರಪ್ಪ ಅವರು ಯಾರ ಬೆದರಿಕೆ, ಮುಲಾಜಿಗೂ ಒಳಗಾಗದೇ ರಾಜ್ಯದ ನೈಸರ್ಗಿಕ ಸಂಪತ್ತನ್ನು ಕಾಪಾಡಲು ಮುಂದಾಗಬೇಕು ಎಂದು ಹೇಳಿದರು.
ಕರ್ನಾಟಕ - ಆಂಧ್ರದ ಗಡಿ ಒತ್ತುವರಿ ಕುರಿತು ಆರೋಪ - ಪ್ರತ್ಯಾರೋಪಗಳು ಕೇಳಿಬಂದಾಗ ನಾವು ಸರ್ವೇಗೆ ಸಿದ್ಧ' ಎನ್ನುವ ರಾಜ್ಯ ಸರ್ಕಾರದಲ್ಲಿ ಅಧಿಕಾರ ಹೊಂದಿರುವವರು, ಕೋರ್ಟ್ಗೆ ಹೋಗಿ ಸರ್ವೇಗೆ ಅಡ್ಡಿಪಡಿಸುತ್ತಿದ್ದಾರೆ. ಗಡಿಯನ್ನು ಗುರುತಿಸುವ ನಿಟ್ಟಿನಲ್ಲಿ ಅವರಲ್ಲೇ ಗೊಂದಲದ ನಿಲುವು ಇದೆ. ಹೀಗಾಗಿ ವಿವಾದ ಅನಗತ್ಯವಾಗಿ ಮುಂದುವರೆಯುತ್ತಿದೆ ಎಂದರು.
ಗಣಿಗಾರಿಕೆ ಸ್ಥಗಿತ : ಸುಪ್ರೀಂಕೋರ್ಟ್ ಗಣಿ - ಗಡಿ ಸರ್ವೇಗೆ ಆದೇಶ ಜಾರಿ ಮಾಡಿರುವ ಹಿನ್ನಲೆಯಲ್ಲಿ ಆಂಧ್ರದ ಗಡಿಯಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವಿವಾದಿತ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ನ ಚಟುವಟಿಕೆಗಳು ಮಂಗಳವಾರದಿಂದ ಸ್ಥಗಿತಗೊಂಡಿವೆ.
ಅನಂತಪುರದ ಅರಣ್ಯ ಇಲಾಖೆಯ ಜಿಲ್ಲಾ ಅಧಿಕಾರಿ ವೆಂಕಟರಮಣಪ್ಪ ನಾಯಕ್ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಯಲ್ಟಿ ಅಧಿಕಾರಿ ಅಮೀರ್ ಭಾಷ ನೇತೃತ್ವದ ತಂಡ ಗಣಿ ಚಟುವಟಿಕೆ ನಡೆಯುತ್ತಿದ್ದ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ನ 1, 2 ಮತ್ತು ಅನಂತಪುರ ಮೈನಿಂಗ್ ಕಾರ್ಪೊರೇಷನ್ಗೆ ಭೇಟಿ ನೀಡಿ ಚಟುವಟಿಕೆಗಳನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಆದೇಶ ನೀಡಿದ್ದಾರೆ.
ನೈಸ್ ವಿವಾದ : ಸದನದಲ್ಲಿ ನೈಸ್ ವಿವಾದ ಕುರಿತು ಚರ್ಚೆ ನಡೆಯಬೇಕಿತ್ತು. ಮತ್ತು ರೈತರ ಭೂಮಿಯನ್ನು ಕಬಳಿಸುತ್ತಿರುವ ನೈಸ್ ಸಂಸ್ಥೆಯ ಬಗ್ಗೆ ವಾಸ್ತವಾಂಶಗಳು ಜನತೆಗೆ ತಿಳಿಯಬೇಕಿತ್ತು. ಮುಖ್ಯಮಂತ್ರಿಗಳು ಈ ಕುರಿತು ಚರ್ಚೆ ನಡೆಸುವುದಾಗಿ ಹೇಳಿ ತಪ್ಪಿಸಿಕೊಳ್ಳಬಾರದಿತ್ತು ಎಂದರು ಎಂ.ಪಿ. ಪ್ರಕಾಶ್.
ಹಂಪೆ ಕನ್ನಡ ವಿಶ್ವವಿದ್ಯಾಲಯದ 80 ಎಕರೆ ಭೂಮಿಯನ್ನು ಟ್ರಸ್ಟ್ಗೆ ಪರಭಾರೆ ಆಗದಂತೆ ಹೋರಾಟ ನಡೆಸಿದ ಕನ್ನಡಿಗರು, ಸಾಹಿತಿಗಳು ಅರ್ಹ ಜಯವನ್ನೇ ಪಡೆದಿದ್ದಾರೆ. ಇಲ್ಲವಾದಲ್ಲಿ ವಿಶ್ವವಿದ್ಯಾಲಯದಲ್ಲಿ ಕೇಸರೀಕರಣ' ಸ್ಪಷ್ಟವಾಗಿ ಪ್ರಭಾವ ಬೀರುತ್ತಿತ್ತು ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications