ಟಿ20 ವಿಶ್ವಕಪ್ ಗೆ ಆಯ್ಕೆ ;ಗಾಯಳುಗಳದ್ದೇ ಸಮಸ್ಯೆ

ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಆಯ್ಕೆದಾರರ ಮುಂದೆ ಇರುವ ದೊಡ್ಡ ಪ್ರಶ್ನೆ
ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಗಾಯಾಳು ಪಟ್ಟಿಯಲ್ಲಿರುವ ಪ್ರಮುಖರು. ಪ್ರಸ್ತುತ ನಡೆಯುತ್ತಿರುವ ಐಪಿಎಲ್ನ ಕೆಲ ಪಂದ್ಯಗಳಿಂದ ಹೊರಗುಳಿದಿರುವ ಧೋನಿ ಮತ್ತು ಗಂಭೀರ್ ಸಂಪೂರ್ಣ ಚೇತರಿಸಿಕೊಳ್ಳುವ ಅವಧಿಯ ಮೇಲೆ ಅವರ ಆಯ್ಕೆ ನಿಂತಿರುತ್ತದೆ. ನೆನ್ನೆ ಮುಂಬೈ ಇಂಡೀಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಧೋನಿ ಆಡುವ ಮೂಲಕ ಕೊಂಚ ಭರವಸೆ ಮೂಡಿಸಿದ್ದಾರೆ. ಪಕ್ಕೆಲುಬು ನೋವಿನಿಂದ ಬಳಲುತ್ತಿರುವ ಮಧ್ಯಮ ವೇಗಿ ಆಶಿಶ್ ನೆಹ್ರಾ ಕೂಡ ಐಪಿಎಲ್ನಲ್ಲಿ ಇದುವರೆಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಒಂದೂ ಪಂದ್ಯವನ್ನಾಡಿಲ್ಲ.
ಪ್ರಮುಖ ಆಟಗಾರರು ಸ್ಥಾನ ಪಡೆಯುವುದು ಖಚಿತವಾಗಿದ್ದರೂ ಸಹ ಕೆಲ ಹೊಸಬರ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ. ಮುಖ್ಯವಾಗಿ ಕರ್ನಾಟಕದ ಯುವ ಪ್ರತಿಭೆ ಮನೀಷ್ ಪಾಂಡೆ ಬಗ್ಗೆ ಚರ್ಚೆ ನಡೆದಿದೆ. ಈ ಸಾಲಿನ ರಣಜಿ ಋತುವಿನಲ್ಲಿ ಅತಿ ಹೆಚ್ಚು ರನ್ ಸಂಪಾದಿಸಿದ ಖ್ಯಾತಿ ಹೊಂದಿರುವ ಮನೀಷ್ ಐಪಿಎಲ್ನಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚುತ್ತಿದ್ದಾರೆ.
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ತಂಡದ ರಾಬಿನ್ ಉತ್ತಪ್ಪ, ವಿನಯ್ ಕುಮಾರ್ ,ಮುಂಬಯಿ ಇಂಡಿಯನ್ಸ್ನ ಸೌರಭ್ ತಿವಾರಿ ಹಾಗೂ ಕೋಲ್ಕೊತಾ ನೈಟ್ ರೈಡರ್ಸ್ನ ಮುರಳಿ ಕಾರ್ತಿಕ್ ಸಂಭಾವ್ಯರ ಪಟ್ಟಿಯಲ್ಲಿ ಇಲ್ಲದಿದ್ದರೂ ಸಹ ಆಯ್ಕೆದಾರರು ಇವರ ಆಯ್ಕೆ ಸಮಿತಿಗೆ ಗಾಯಾಳುಗಳದ್ದೇ ದೊಡ್ಡ ಪ್ರಶ್ನೆ
ವೆಸ್ಟ್ ಇಂಡೀಸ್ನಲ್ಲಿ ಏಪ್ರಿಲ್ 30 ರಿಂದ ಮೇ 16 ರ ವರೆಗೆ ನಡೆಯಲಿರುವ ಈ ಪಂದ್ಯಾವಳಿಗಾಗಿ ಈ ಮೊದಲೇ ಭಾರತ ತಂಡದ 30 ಸದಸ್ಯರ ಸಂಭಾವ್ಯರ ಪಟ್ಟಿ ಪ್ರಕಟಿಸಲಾಗಿದೆ. ಕೃಷ್ಣಮಾಚಾರಿ ಶ್ರೀಕಾಂತ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಈ ಪಟ್ಟಿಯಿಂದಲೇ 15 ಆಟಗಾರರನ್ನು ಆಯ್ಕೆ ಮಾಡಲಿದೆ. ಇಂಗ್ಲೆಂಡ್ನಲ್ಲಿ ಕಳೆದ ಜೂನ್ನಲ್ಲಿ ನಡೆದ ಎರಡನೇ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವಲ್ಲಿ ಭಾರತ ವಿಫಲವಾಗಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications