ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತವರಿನತ್ತ ಹೆಜ್ಜೆಯಿರಿಸಿದ ಉಮಾಭಾರತಿ?
2005ರಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಉಮಾಭಾರತಿ ತಾವು ಸ್ಥಾಪಿಸಿದ್ದ ಭಾರತೀಯ ಜನಶಕ್ತಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಆದರೆ ಆಕೆ ಬಿಜೆಪಿ ಹೊಸ ಅಧ್ಯಕ್ಷ ನಿತಿನ್ ಗಡ್ಕರಿ ಅವರೊಂದಿಗೆ ಬಿಜೆಪಿಗೆ ಮರಳುವ ಬಗ್ಗೆ ಯಾವುದೇ ಚರ್ಚೆ ನಡೆಸುವ ಎಲ್ಲ ಸಾಧ್ಯತೆಗಳು ಇವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಲೋಕಸಭಾ ಚುನಾವಣೆಗಳಿಗೆ ಮೊದಲು ಉಮಾ, ಬಿಜೆಪಿ ನಾಯಕರನ್ನು ಭೇಟಿಯಾಗಿ ಪಕ್ಷಕ್ಕೆ ಮರಳುವ ಇರಾದೆ ವ್ಯಕ್ತಪಡಿಸಿದ್ದರು. ಫಲಿತಾಂಶದ ತನಕ ಕಾಯಲು ಆವರಿಗೆ ಸೂಚಿಸಲಾಗಿತ್ತು. ಬಿಜೆಪಿ ವೇದಿಕೆಯಲ್ಲಿ ಆಕೆ ಪ್ರಚಾರ ನಡೆಸಿದ್ದರೂ ಕೂಡಾ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸಿರಲಿಲ್ಲ. ಆದರೆ ಬಿಜೆಪಿಗೆ ಹೀನಾಯ ಸೋಲುಂಟಾದ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಆಂತರಿಕ ಕಚ್ಚಾಟಗಳಿಂದಾಗಿ ಉಮಾಭಾರತಿ ಮರುಸೇರ್ಪಡೆ ವಿಷಯ ನೆನೆಗುದಿಗೆ ಬಿದ್ದಿತ್ತು.
Comments
Story first published: Friday, March 26, 2010, 12:20 [IST]