ವಿಧಾನಸೌಧ ಈಗ ಆರ್ಎಸ್ಎಸ್ ಕೇಂದ್ರ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ ವಿಧಾನಸೌಧ ಈಗ ಆರ್ಎಸ್ಎಸ್ ಹೆಡ್ ಕ್ವಾರ್ಟರ್ಸ್ ಆಗಿದೆ ಎಂದರು. ಆರ್ಎಸ್ಎಸ್ ಮುಖಂಡರ ಸೂಚನೆಯಂತೆ ಆಡಳಿತ ನಡೆಯುತ್ತಿದೆ. ಯಡಿಯೂರಪ್ಪ ಅವರ ಸರ್ಕಾರ ಅತ್ಯಂತ ಕೋಮುವಾದಿ ಸರ್ಕಾರವಾಗಿದ್ದು, ಇಂತಹ ಸರ್ಕಾರವನ್ನು ನಾನೆಂದೂ ನೋಡಿಲ್ಲ. ಅಲ್ಪಸಂಖ್ಯಾತರನ್ನು ಮಟ್ಟಹಾಕಲು ಗೋ ಹತ್ಯೆ ಮಸೂದೆಯನ್ನು ಜಾರಿಗೆ ತರುವ ಹುನ್ನಾರ ನಡೆಸಿದೆ ಎಂದರು.
ಬಿಬಿಎಂಪಿ ಚುನಾವಣೆ ನಂತರ ಯಡಿಯೂರಪ್ಪ ಅವರ ಸರ್ಕಾರ ಪತನವಾಗಲಿದೆ. ನಾವು ಬೀಳಿಸಲಿಕ್ಕೆ ಹೋಗಲ್ಲ. ಅವರ ಪಕ್ಷದವರೇ ಬೀಳಿಸುತ್ತಾರೆ ಎಂದು ಧರಂಸಿಂಗ್ ಹೇಳಿದರು.












Click it and Unblock the Notifications