ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌಡರೆ, ಬೇಳೆ ಬೇಯಿಸಿಕೊಳ್ಳಬೇಡಿ

By Mrutyunjaya Kalmat
|
Google Oneindia Kannada News

Yeddyurappa
ಬೆಂಗಳೂರು, ಮಾ. 26 : ನೈಸ್ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ನೈಸ್ ವಿರುದ್ಧ ಹೋರಾಟ ನಡೆಸುತ್ತಿರುವ ದೇವೇಗೌಡರು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದು, ಅವರ ಆಟ ನಡೆಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೈಸೂರು ಕಾರಿಡಾರ್ ರಸ್ತೆ ಯೋಜನೆ ನಿರಾತಂಕವಾಗಿ ಮುಂದುವರೆಯಲಿದೆ ಎಂದರು. ದೇವೇಗೌಡರು ಈ ನೈಸ್ ಯೋಜನೆಯನ್ನು ಆರಂಭಿಸಿದ್ದು, ಇದೀಗ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೊಬ್ಬೆ ಹಾಕುತ್ತಿರುವವರು ಅವರೇ, ಅವರು ಯಾಕೆ ಅಂದು ಅರ್ಥ ಈ ಸಮಸ್ಯೆ ಅರ್ಥವಾಗಲಿಲ್ಲ ಎಂದು ಯಡಿಯೂರಪ್ಪ ತಿರಗೇಟು ನೀಡಿದ್ದಾರೆ.

ನೈಸ್ ಯೋಜನೆ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಎಸ್ ಎಂ ಕೃಷ್ಣ ಕಾಲದಲ್ಲಿ ಬಹುತೇಕ ಕೆಲಸ ಆಗಿವೆ. ಈ ಬಗ್ಗೆ ಅವರಿಗೆ ಪತ್ರ ಬರೆದು ಮಾಜಿ ಪ್ರಧಾನಿಗಳು ಸರಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಯೋಜನೆಯನ್ನು ಮುಂದುವರೆಸಬೇಕೇ,ಬೇಡವೇ ಎಂಬುದನ್ನು ತೀರ್ಮಾನಿಸಲಾಗುವುದು. ಕೂಡಲೇ ಈ ಇಬ್ಬರು ನಾಯಕರಿಗೆ ಪತ್ರ ಬರೆಯಲಾಗುವುದು. ಸಾಧ್ಯವಾದರೆ, ನಾನೇ ಈ ಇವರನ್ನು ಭೇಟಿ ಮಾಡಿ ಚರ್ಚಿಸುವೆ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X