ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಯುಪಿಎ ವಿರುದ್ಧ ಮಹಿಳಾ ಮೋರ್ಚಾ ಪ್ರತಿಭಟನೆ
ದಿನನಿತ್ಯದ ಅಗತ್ಯ ವಸ್ತುಗಳಾದ ಬೇಳೆಕಾಳು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಇನ್ನೂ ಅನೇಕ ದಿನಬಳಕೆ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದರೂ ಸಹ ಇದನ್ನು ನಿಗ್ರಹಿಸುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಗ್ರಾಮಾಂತರ ಘಟಕದ ಅಧ್ಯಕ್ಷೆ ಪದ್ಮಿನಿ ಆರೋಪಿಸಿದರು.
ಬೆಲೆ ಏರಿಕೆಯಿಂದಾಗಿ ದಲಿತರು, ಕೃಷಿ ಕೂಲಿಕಾರ್ಮಿಕರು, ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಆದ್ದರಿಂದ ಬೆಲೆ ಇಳಿಕೆಗೆ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯೆ ರೇಣುಕಾನಾಗರಾಜ್, ಸುಧಾಮಣಿಬೋರಯ್ಯ, ನಾಗರತ್ನಸೋಮಶೇಖರ್, ನಿರ್ಮಲಾ, ನಿರ್ಮಲಾಗಣೇಶ್ ಮುಂತಾದವರು ಉಪಸ್ಥಿತರಿದ್ದರು.
Comments
ಯುಪಿಎ ಕಾಂಗ್ರೆಸ್ ಶಿವಮೊಗ್ಗ ಕೆಆರ್ ಸೋಮನಾಥ್ ಬಿಜೆಪಿ ಬೆಲೆ ಏರಿಕೆ ನಾಗರಿಕ ಪತ್ರಕರ್ತ upa congress kr somanath citizen journalist shivamogga
Story first published: Saturday, March 27, 2010, 15:48 [IST]