ಮತದಾನಕ್ಕೆ ಗುರುತಿನ ಚೀಟಿ ಕಡ್ಡಾಯ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ, 100 ವಾರ್ಡ್ ಗಳಿದ್ದ ಪಾಲಿಕೆ ಇದೀಗ 198 ವಾರ್ಡ್ ಗಳಾಗಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಚುನಾವಣೆ ನಡೆಯತ್ತಿದೆ. ಭಾನುವಾರ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರಗೆ ಮತದಾನ ನಡೆಯಲಿದೆ ಎಂದರು.
ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತಗಟ್ಟೆಗಳಿಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಇಂದು ಸಂಜೆಯೇ ಎಲೆಕ್ಟ್ರಾನಿಕ್ ಮತಯಂತ್ರದ ಜೊತೆಗೆ ಮತದಾನ ಕೇಂದ್ರಕ್ಕೆ ತೆರಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆಯ ಎಲ್ಲ ಹಂತದಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ಸೂಚಿಸಲಾಗಿದೆ. ಈ ಬಾರಿ ಮತದಾನ ಮಾಡುವವರಿಗೆ ಬಲಗೈ ತೋರುಬೆರಳಿಗೆ ಶಾಹಿ ಹಾಕುವಂತೆ ನಿರ್ದೇಶನ ನೀಡಲಾಗಿದೆ ಎಂದು ಮೀನಾ ಸ್ಪಷ್ಟಪಡಿಸಿದರು.
ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯಲು ಎಲ್ಲೆಡೆ ಸರ್ಪಗಾವಲು ಹಾಕಲಾಗಿದ್ದು, ಮತದಾನದ ಹಕ್ಕು ಹೊಂದಿಲ್ಲದವರು ಮತಕ್ಷೇತ್ರ ಬಿಟ್ಟು ಹೊರಹೋಗುವಂತೆ ಸೂಚಿಸಲಾಗಿದೆ. 198 ವಾರ್ಡ್ ಗಳಲ್ಲಿ ಮತದಾನ ನಡೆಯಲಿದ್ದು, ಸೂಕ್ಷ್ಮ,ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಒಟ್ಟು 66,06,674 ಮತದಾರರು ಮತ ಚಲಾಯಿಸಲಿದ್ದಾರೆ.
ಈಗಾಗಲೇ ಅಧಕಾರಿಗಳು ಮತಗಟ್ಟೆಗೆ ತೆರಳಿದ್ದು, ನಾಲ್ಕು ವಿಭಾಗಗಳನ್ನು ತೆರೆಯಲಾಗಿದೆ. 21,773 ಮತಗಟ್ಟೆ ಅಧಿಕಾರಿಗಳು ಚುನಾವಣಾ ಕಾರ್ಯ ನಿರ್ವಹಿಸಲಿದ್ದಾರೆ. 7,260 ಪ್ರಿಸೈಡಿಂಗ್ ಅಧಿಕಾರಿಗಳು,27 ಜನ ವೀಕ್ಷಕರು ಸೇರಿದಂತೆ ಒಟ್ಟು 29,100 ಸಿಬ್ಬಂದಿ ಭಾನುವಾರದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮತದಾನ ಎಲ್ಲರ ಹಕ್ಕು, ಎಲ್ಲರೂ ಮತದಾನ ಮಾಡಬೇಕು ಎಂದು ಮೀನಾ ವಿವರಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications