ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಪಂ ಚುನಾವಣೆ ಮುಂದೂಡಲ್ಲ: ಸಿಎಂ

By Mrutyunjaya Kalmat
|
Google Oneindia Kannada News

Yeddyurappa
ಬಳ್ಳಾರಿ, ಮಾ. 29 : ಗ್ರಾಮ ಪಂಚಾಯತಿ ಚುನಾವಣೆಗಳನ್ನು ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದರು. ಜಿಲ್ಲೆಯ ತೋರಣಗಲ್ಲು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಮುಖ ಹಂತವಾಗಿರುವ ಗ್ರಾಮ ಪಂಚಾಯಿತಿಗಳ ಆಡಳಿತ ಆಡಳಿತಾಧಿಕಾರಿಗಳ ಕೈಯಲ್ಲಿ ಬಹಳ ದಿನ ಇರಬಾರದು ಎನ್ನುವುದು ಸರಕಾರದ ಕಾಳಜಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಿಗದಿತ ಸಮಯದಲ್ಲೇ ನಡೆಯಲಿವೆ ಎಂದರು. ಬಜೆಟ್ ನಲ್ಲಿ ಅನುಮೋದಿಸಿದ ಕಾರ್ಯಕ್ರಮಗಳನ್ನು ಜಾರಿಗೆ ತರಲು ಅನುಕೂಲವಾಗುವಂತೆ ಶೀಘ್ರ ಆದೇಶ ಹೊರಡಿಸಿಲು ಏಪ್ರಿಲ್ 5 ರಂದು ಎಲ್ಲ ಸಚಿವರು ಹಾಗೂ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಕರೆಯಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X