Get Updates
Get notified of breaking news, exclusive insights, and must-see stories!

ಬೈಕ್ ಸ್ಟಂಟ್ ಮಾಡಿ ಪ್ರಾಣತೆತ್ತ ಯುವಕರು

Bike accident
ಬೆಂಗಳೂರು, ಮಾ.29: ಬೈಕ್ ಸ್ಟಂಟ್, ಡ್ರಾಗ್ ರೇಸ್, ವ್ಹೀಲಿಂಗ್ ಮಾಡುವುದನ್ನು ನಿಷೇಧಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿದರೂ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಸಾಹಸಗಳು ನಡೆಯುತ್ತಲೇಇವೆ. ಹಾಗೆ , ಯುವಕರು ಸ್ಟಂಟ್ ಮಾಡಲು ಹೋಗಿ ಸಾವಿನ ಮನೆಯ ಕದ ತಟ್ಟುತ್ತಲೇ ಇದ್ದಾರೆ. ಭಾನುವಾರ ಸಂಜೆ ಕೂಡ ಇಂಥಾ ದುರ್ಘಟನೆ ನಡೆಯಿತು.

ವ್ಹೀಲಿಂಗ್ ಮಾಡುತ್ತಾ ಜಾಲಿ ರೈಡ್ ನಲ್ಲಿದ್ದ ಬೈಕ್ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಬಡಿದು , ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ದಿನೇಶ್ ಅಲಿಯಾಸ್ ಕೃಷ್ಣೇಗೌಡ (24) ಹಾಗೂ ಸಾಗರ್ (23) ಮೃತರು. ಇಬ್ಬರೂ ಬಿಹಾರ ಮೂಲದವರು ಎನ್ನಲಾಗಿದೆ. ಕಂಠೀರವ ಸ್ಟುಡಿಯೋ ಎದುರು ಈ ಅಪಘಾತ ಸಂಭವಿಸಿದ್ದು, ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂದಿನಿ ಲೇಔಟ್ ನ ಖಾಸಗಿ ಕಂಪೆನಿಯಲಿ ಕೆಲಸ ನಿರ್ವಹಿಸುತ್ತಿದ್ದ ಸಾಗರ್, ರಾಜಾಜಿನಗರದ ನಿವಾಸಿಯಾಗಿದ್ದರು. ದಿನೇಶ್ ಡೈವರ್ ಆಗಿ ಕೆಲಸ ಮಾಡುತ್ತಿದ್ದರು. ಬಿಬಿಎಂಪಿ ಚುನಾವಣೆಯಂದು ಮತದಾನ ಮಾಡಿ ಹಿಂದುರುಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+