ಕೆರೆಕಟ್ಟೆ ನಿರ್ವಹಣೆಗೆ ಒಂದೇ ಇಲಾಖೆ : ಕಾರಜೋಳ

ಗುರುವಾರ ರಾತ್ರಿ ಸವಣೂರಿಗೆ ಭೆಟ್ಟಿ ನೀಡಿದ್ದ ಅವರು ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಟ್ಟೂ 36,600 ಕೆರೆಗಳಿದ್ದು, ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಕೇವಲ 3400 ಕೆರೆಗಳು ಮಾತ್ರ ಒಳಪಡುತ್ತದೆ. ಉಳಿದ ಕೆರೆಗಳು ಆಯಾ ಗ್ರಾಮ ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಒಳಪಡುತ್ತಿದೆ ಎಂದರು.
ವರದಾ ನದಿ ದಂಡೆಯಲ್ಲಿನ 25 ಹಳ್ಳಿಗಳು ಪ್ರತಿ ವರ್ಷ ಪ್ರವಾಹ ಪೀಡಿತವಾಗುತ್ತಿವೆ. ಈ ಬಾರಿಯ ಪ್ರವಾಹದ ತೊಂದರೆಗಳನ್ನು ಎದುರಿಸಲು 34 ಕೋಟಿ ರೂ.ಗಳನ್ನು ಸರಕಾರ ಕಾಯ್ದಿರಿಸಿದೆ ಎಂದು ತಿಳಿಸಿದ ಅವರು, ನದಿಯಂಚಿನ ಗ್ರಾಮಸ್ಥರು ಎದುರಿಸುತ್ತಿರುವ ಹಲವಾರು ಸಂಕಷ್ಟಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು. ನದಿಯಂಚಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರೇಜ್ಗಳನ್ನು ನಿರ್ಮಿಸುವ ಬಗ್ಗೆಯೂ ಇಲಾಖೆ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಹೊಸ ಕೆರೆಗಳ ನಿರ್ಮಾಣ, ಜಲಮೂಲಗಳ ಅಭಿವೃದ್ದಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲಾಗುತ್ತದೆ. ಗಂಗಾಕಲ್ಯಾಣ ಯೋಜನೆಯ ಅಡಿ ಎಸ್.ಸಿ.ಎಸ್.ಟಿ ಗುಂಪುಗಳ ಕ್ಷೇತ್ರಗಳಿಗೆ ಸಂಪೂರ್ಣ ಉಚಿತವಾಗಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳ್ಳಲಿದೆ. ಎಕರೆಗೆ 1 ಲಕ್ಷ ರೂ.ಗಳ ವೆಚ್ಚದಲ್ಲಿ ನೀರಾವರಿ ಉಪಕರಣ, ಕೊಳವೆ ಭಾವಿಗಳ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ ಸಚಿವರು, ಈ ಕಾರ್ಯಕ್ರಮಕ್ಕೆ ಒಂದು ಕೋಟಿ ರೂ. ಅನುದಾನವನ್ನು ಸರಕಾರ ಕಾಯ್ದಿರಿಸಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಮ್ ಉದಾಸಿ ಉಪಸ್ಥಿತರಿದ್ದರು. ಬಯಲುಸೀಮೆ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ರಾಜಶೇಖರ ಸಿಂಧೂರ ಅವರ ನಿವಾಸಕ್ಕೆ ಭೆಟ್ಟಿ ನೀಡಿದ್ದ ಸಚಿವರು, ಬಳಿಕ ಗದಗ ಪಟ್ಟಣಕ್ಕೆ ತೆರಳಿದರು. ನಗರದ ಪ್ರಮುಖರಾದ ಮಂಜುನಾಥ ಗಾಣಿಗೇರ, ಬಸವರಾಜ ಬೆಣ್ಣಿ, ಸಂಗಪ್ಪ ಯರೇಶಿಮಿ, ಅಮರ ಬಗರೆ, ನಾಗೇಶ ಪಾಟೀಲ, ಗದಿಗೇಶ ಕುಲಕರ್ಣಿ, ವೀರಣ್ಣ ಜಾವೂರ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications