ಹಿರಿಯ ಪತ್ರಕರ್ತ ಬೆ.ಸು.ನಾ ಮಲ್ಯ ನೆನಪು

ರಾಜ್ಯದ ಮೊದಲ ಪತ್ರಿಕಾ ಅಕಾಡೆಮಿಯ ಸದಸ್ಯರಾಗಿದ್ದು, ಸಾಹಿತ್ಯಕ್ಷೇತ್ರದಲ್ಲಿ ಸುನಾಮ ಎಂಬ ಕಾವ್ಯನಾಮದಿಂದ ಖ್ಯಾತರಾಗಿದ್ದರು. ಅಖಿಲ ಭಾರತ ವೃತ್ತ ಪತ್ರಿಕಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಸತತ ಮೂರು ವರ್ಷ ಆಯ್ಕೆಯಾಗಿದ್ದರು. ಸಂಜೆ ಪೆರ್ವಾಜೆಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಿತು.
ಬೆಸುನಾ ಮಲ್ಯ ಅವರ ಜೀವನದ ಸಂಕ್ಷಿಪ್ತ ಚಿತ್ರಣ:
*1927ರಲ್ಲಿ ದ.ಕ. ಜಿಲ್ಲೆಯ ಕಾರ್ಕಳದ ಬಳಿಯ ಬೆಳುವಾಯಿಯಲ್ಲಿ ಸುಬ್ರಾಯ ನಾರಾಯಣ ಮಲ್ಯ ಜನನ.
*ವಿದ್ಯಾಭ್ಯಾಸದ ತರುವಾಯ ಕೆನರಾ ಬ್ಯಾಂಕ್ನಲ್ಲಿ ಉದ್ಯೋಗ .
*1940 ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಸಂಪರ್ಕ.
*1948 ರಲ್ಲಿ ಬೆಂಗಳೂರಿನಲ್ಲಿ 'ವಿಕ್ರಮ' ವಾರಪತ್ರಿಕೆ ಪ್ರಾರಂಭ, ಗದಗಿನಲ್ಲಿದ ಬ್ಯಾಂಕ್ ಉದ್ಯೋಗ ಬಿಟ್ಟು ಬೆಸುನಾ ಅವರಿಂದ ಸಂಪಾದಕತ್ವ ಸ್ವೀಕಾರ.
*1948 ರಲ್ಲಿ ಆರೆಸ್ಸೆಸ್ ಕರೆಯಿತ್ತ ಸತ್ಯಾಗ್ರಹ' ಆಂದೋಲನದಲ್ಲಿ ಭಾಗಿಯಾಗಿ, ಜೈಲುವಾಸ ಅನುಭವಿಸಿ, ಜೀವನ ಪೂರ್ತಿ ಅವಿವಾಹಿತರಾಗಿದ್ದರು.
*1953ರಿಂದ 1996 ವರೆಗೆ ಸ್ವಾವಲಂಬಿ ಪತ್ರಿಕೆಯಾಗಿ 'ವಿಕ್ರಮ' ಹೊರಹೊಮ್ಮಲ್ಲು ಮಲ್ಯರ ಪರಿಶ್ರಮ ಕಾರಣ.
*ಕನ್ನಡ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಪಾರಿಭಾಷಿಕ ಶಬ್ದಕೋಶ ರಚಿಸಿದ್ದಾರೆ.
*ಕಡಿದಾಳ್ ಮಂಜಪ್ಪ, ಎಸ್ ನಿಜಲಿಂಗಪ್ಪ,ತಿ.ತಾ. ಶರ್ಮ, ಮುತ್ಸದ್ದಿ ರಾರಾಜಿ, ನ್ಯಾಯಮೂರ್ತಿ ಎಂ.ರಾಮಾಜೋಯಿಸ್ ಸೇರಿದಂತೆ ಅಪಾರ ಮಿತ್ರವೃಂದವನ್ನು ಮಲ್ಯರು ಪಡೆದಿದ್ದರು.
*ಸದಾ ಚಿಂತನಶೀಲ ಸುನಾಮ(ಬೇಸುನಾ ಮಲ್ಯರ ಕಾವ್ಯನಾಮ)ರಿಗೆ ರಾಷ್ಟ್ರದ ಉನ್ನತ ಪತ್ರಿಕಾ ಪ್ರಶಸ್ತಿ 'ನಚಿಕೇತ' ನೀಡಿ ಅಂದಿನ ವಾಜಪೇಯಿ ಸರ್ಕಾರ ಗೌರವಿಸಿತ್ತು.
*1975 ರಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಾಜಪೇಯಿ,ಲಾಲ್ಕೃಷ್ಣ ಅಡ್ವಾಣಿ ಜತೆಗೆ ಸೆರೆಮನೆ ವಾಸ ಅನುಭವಿಸಿದ್ದರು.
*ಕನ್ನಡ, ಸಂಸ್ಕೃತ, ಇಂಗ್ಲಿಷ್, ಹಿಂದಿ, ಮರಾಠಿ, ಕೊಂಕಣಿ ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು.
*ಭಾರತ ವೃತ್ತ ಪತ್ರಿಕಾ ಸಂಘದ ಕಾರ್ಯಸಮಿತಿ ಸದಸ್ಯ, ರಾಜ್ಯದ ಪ್ರಪ್ರಥಮ ಪತ್ರಿಕಾ ಅಕಾಡೆಮಿ ಸದಸ್ಯ, ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ, ದೂರವಾಣಿ ಸಮಿತಿ ಸದಸ್ಯ, ಅಖಿಲ ಭಾರತ ಸಂಪಾದಕ ಕಾರ್ಯಪಡೆ ಸದಸ್ಯ, ವಿಶ್ವಹಿಂದೂ ಪರಿಷತ್ ಕರ್ನಾಟಕ ಪ್ರಾಂತ್ಯ ಪ್ರಥಮ ಕಾರ್ಯದರ್ಶಿ, ರಾಜ್ಯ ದೂರಸಂಪರ್ಕ ವರ್ತುಲದ ಸಲಹಾ ಸಮಿತಿ ಸದಸ್ಯರಾಗಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications