ಮೊಬೈಲನ್ನು ಸ್ಮಾರ್ಟ್ ಫೋನ್ ಮಾಡಿಕೊಳ್ಳಿ

ಜಿಪಿಆರ್ ಎಸ್(GPRS) , ಮೊಬೈಲ್ ಇಂಟರ್ ನೆಟ್ ಯೋಜನೆ ಅಥವಾ ದುಬಾರಿ ವೆಚ್ಚದ ಸ್ಮಾರ್ಟ್ ಫೋನ್ ಇಲ್ಲದಿರುವ ಅನೇಕ ಗ್ರಾಹಕರಿಗೆ ಬ್ಲಾಕ್ ಮೇಲ್ ಎಂಬ ಮೌಲ್ಯಾಧಾರಿತ ಸೇವೆ(VAS) ವರದಾನವಾಗಲಿದೆ.
ಎಲ್ಲಿ ಲಭ್ಯ? ಏನು ಉಪಯೋಗ: ಬ್ಲಾಕ್ ಮೇಲ್ ಸೇವೆ ಸದ್ಯಕ್ಕೆ ಯೂನಿವರ್ಸೆಲ್ ಹಾಗೂ ಸಂಗೀತಾ ಮೊಬೈಲ್ ಮಳಿಗೆಗಳಲ್ಲಿ ಲಭ್ಯವಿದೆ. ಕೆಫೆ ಕಾಫಿ ಡೇ ಅಥವಾ ದುಬಾರಿ ಕಾಫಿ ಪ್ರಿಯರ ಒಂದು ಕಪ್ ಕಾಫಿ ಬೆಲೆ ತೆತ್ತರೆ ನಿಮ್ಮ ಫೋನ್ ಗೆ ಬ್ಲಾಕ್ ಮೇಲ್ ಸೇವೆ ಲಭ್ಯ ಎಂದು ಸಂಸ್ಥೆ ಜಾಹೀರಾತು ನೀಡುತ್ತಿದೆ.
ಸುಮಾರು 49 ರು ನೀಡಿ ಜಿಪಿಆರ್ ಸಿ ಅಥವಾ ಸ್ಮಾರ್ಟ್ ಫೋನ್ ನಲ್ಲಿ ಸಿಗಬಹುದಾದ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸ್ಪಷ್ಟವಾಗಿ ಹೇಳುವುದಾದರೆ ಬ್ಲಾಕ್ ಬೆರಿ ರೀತಿಯ ಸ್ಮಾರ್ಟ್ ಫೋನ್ ಗಳಲ್ಲಿ ಸಿಗುವ ಮೌಲ್ಯಾಧಾರಿತ ಸೇವೆಗಳು ಕೇವಲ 49 ರು.ಗಳಿಗೆ ನಿಮಗೆ ಲಭ್ಯವಾಗಲಿದೆ.
ಬ್ಲಾಕ್ ಮೇಲ್ ಸೇವೆ ಪಡೆಯಲು ನಿಮ್ಮ ಮೊಬೈಲ್ ಫೋನ್ ನಲ್ಲಿ ಜಾವಾ ಸೌಲಭ್ಯ ಇದ್ದರೆ ಸಾಕು. ಈಗಂತೂ ಎಲ್ಲಾ ಮೊಬೈಲ್ ಗಳಲ್ಲಿ ಜಾವಾ ಸೌಲಭ್ಯ ಇರುತ್ತದೆ ಅಲ್ಲದೆ ಅದು ಹೈ ಎಂಡ್ ಸ್ಮಾರ್ಟ್ ಫೋನ್ ಗಳಿಗೆ ಹೋಲಿಸಿದರೆ ಅತ್ಯಂತ ಮಿತವ್ಯಯಿ ಕೂಡ.
ಬ್ಲಾಕ್ ಮೇಲ್ ಸೇವೆಯು ಜಿಎಸ್ ಎಂ ಸೇವೆಯುಳ್ಳ ಎಲ್ಲಾ ಬಗೆಯ ಮೊಬೈಲ್ ಗಳಲ್ಲಿ ಬ್ಲಾಕ್ ಮೇಲ್ ಅಳವಡಿಸಬಹುದು ಹೀಗಾಗಿ ವಿಸ್ಟೃತ ಸಂಪರ್ಕ ಜಾಲ ಹಾಗೂ ನಂಬರ್ ಪೋರ್ಟಬಲಿಟಿ ಆದರೂ ನಿರಂತರ ಸಂಪರ್ಕ ಹೊಂದಲು ಸಾಧ್ಯವಿದೆ.
ಹೆಚ್ಚಾಗಿ ವಿದ್ಯಾರ್ಥಿಗಳು ಹಾಗೂ ಯುವ ಉದ್ಯೋಗಿಗಳನ್ನು ಆಕರ್ಷಿಸಲು ಬ್ಲಾಕ್ ಮೇಲ್ ರೂಪಿಸಲಾಗಿದೆ. ಫೇಸ್ ಬುಕ್, ಆರ್ಕುಟ್ ಮುಂತಾದ ಸೋಷಿಯಲ್ ನೆಟ್ ವರ್ಕಿಂಗ್ , ಉದ್ಯೋಗವಕಾಶ ಶೋಧನೆಗೆ ನೌಕ್ರಿ, ಮಾನ್ ಸ್ಟರ್ ಮುಂತಾದ ತಾಣಗಳನ್ನು ವೀಕ್ಷಿಸಬಹುದು. ಅಲ್ಲದೆ ತ್ವರಿತ ಗತಿಯಲ್ಲಿ ಇಮೇಲ್ ಸೌಲಭ್ಯವನ್ನು ಹೊಂದಲು ಬ್ಲಾಕ್ ಮೇಲ್ ಸಹಕಾರಿ ಎಂದು ಸಂಸ್ಥೆ ಹೇಳಿದೆ.
ಬ್ಲಾಕ್ ಮೇಲ್ ಸೌಲಭ್ಯ ತಂತ್ರಾಂಶವನ್ನು (www.blacmail.in) ತಾಣದಿಂದ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದು. ನಂತರ ಮೊಬೈಲ್ ಮಳಿಗೆಗಳಲ್ಲಿ ರು.49 ನೀಡಿ ಮೌಲ್ಯಾಧಾರಿತ ಸೇವೆ ಪಡೆಯಬಹುದು. ಒಟ್ಟಿನಲ್ಲಿ ಬ್ಲಾಕ್ ಮೇಲ್ ಮೂಲಕ ಸಾಧಾರಣ ಮೊಬೈಲನ್ನು ಸ್ಮಾರ್ಟ್ ಫೋನ್ ನಂತೆ ಬಳಸಬಹುದು ಎನ್ನುತ್ತದೆ ಫಿಫ್ತ್ ಸಿ ಸಲ್ಯೂಷನ್ ಸಂಸ್ಥೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
Fifth C Solutions Pvt. Ltd, Bangalore.
ದೂರವಾಣಿ: +91 80 221011 33/44
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications