Get Updates
Get notified of breaking news, exclusive insights, and must-see stories!

ರಾಜ್ಯ ಹೈಕೋರ್ಟ್ ಗೆ ಹೊಸ ಮುಖ್ಯ ನ್ಯಾಯಮೂರ್ತಿ

Justice Dinakaran asked to go on leave
ನವದೆಹಲಿ, ಏ.3: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಮೂರ್ತಿಪಿ ಡಿ ದಿನಕರನ್ ಅವರನ್ನು ರಜೆ ಮೇಲೆ ತೆರಳುವಂತೆ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿ ಸೂಚಿಸಿದೆ. ರಾಜ್ಯ ಹೈಕೋರ್ಟ್ ಗೆ ಮುಖ್ಯನಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್ ನ ಪ್ರಭಾರ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಮದನ್ ಬಿ ಲೋಕೂರ್ ಅವರನ್ನು ನೇಮಕ ಮಾಡಲಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಪಿ ಡಿ ದಿನಕರನ್ ಅವರು ಕಳೆದ ಡಿಸೆಂಬರ್ ನಿಂದ ನ್ಯಾಯಾಂಗದ ಕೆಲಸಗಳಿಗೆ ಹಾಜರಾಗಿರಲಿಲ್ಲ. ನ್ಯಾಯಾಂಗದ ಕೆಲಸಗಳಿಗೆ ಹಿನ್ನೆಡೆಯಾಗಲಿದೆ ಎಂಬಉದ್ದೇಶದಿಂದ ಸುಪ್ರೀಂಕೋರ್ಟ್ ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿದ್ದ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಪೀಠ ತಿಳಿಸಿದೆ.

ನ್ಯಾಯಮೂರ್ತಿಗಳ ವಿಶಾಲ ಪಟ್ಟಾ ಜಮೀನಿನ ನಡುವೆ ಸುಮಾರು 200 ಎಕರೆಗಳಷ್ಟು ಪರಂಬೋಕ್ (ಸರಕಾರಿ) ಭೂಮಿ ಇದೆ. ಈ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಬೇಲಿ ಹಾಕಲಾಗಿತ್ತು ಎಂಬ ಆರೋಪ ಪಿ ಡಿ ದಿನಕರನ್ ಅವರ ಮೇಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+