ಸಾಮಾನ್ಯ ವರ್ಗಕ್ಕೆ ಮೇಯರ್ ಪಟ್ಟ

ಮಾಜಿ ಮೇಯರ್ ಪಿ ಆರ್ ರಮೇಶ್ ವಿಶ್ವೇಶ್ವರಪುರಂ ವಾರ್ಡ್ ನಲ್ಲಿ ಸೋಲನುಭವಿಸಿದ್ದು, ಮಾಜಿ ಮೇಯರ್ ಗಳಾದ ನಾರಾಯಣಸ್ವಾಮಿ ಮತ್ತು ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮಗ ಕಟ್ಟಾ ಜಗದೀಶ ನಾಯ್ಡು ವಿಜಯದ ನಗೆಬೀರಿದ್ದಾರೆ.
ಬಿಜೆಪಿ ಪಾಳೆಯದಲ್ಲಿ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಅಧಿಕಾರ ಹಿಡಿಯುವುದು ಖಚಿತವಾಗಿದೆ. ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಸುರೇಶ್ ಕುಮಾರ್, ಸಾಮಾನ್ಯ ವರ್ಗಕ್ಕೆ ಮೇಯರ್ ಹಾಗೂ ಪರಿಶಿಷ್ಟ ಜಾತಿಗೆ ಉಪಮೇಯರ್ ಹುದ್ದೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.











Click it and Unblock the Notifications