ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮಾನ್ಯ ವರ್ಗಕ್ಕೆ ಮೇಯರ್ ಪಟ್ಟ

By Mrutyunjaya Kalmat
|
Google Oneindia Kannada News

Suresh Kumar
ಬೆಂಗಳೂರು, ಏ. 5 : ಬಿಬಿಎಂಪಿಯ 198 ವಾರ್ಡ್ ಗಳಲ್ಲಿ 191 ವಾರ್ಡ್ ಗಳ ಫಲಿತಾಂಶ ಹೊರಬಿದ್ದಿದ್ದು, 110 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 60 ಸ್ಥಾನ ಮತ್ತು ಜೆಡಿಎಸ್ 14 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಮಾಜಿ ಮೇಯರ್ ಪಿ ಆರ್ ರಮೇಶ್ ವಿಶ್ವೇಶ್ವರಪುರಂ ವಾರ್ಡ್ ನಲ್ಲಿ ಸೋಲನುಭವಿಸಿದ್ದು, ಮಾಜಿ ಮೇಯರ್ ಗಳಾದ ನಾರಾಯಣಸ್ವಾಮಿ ಮತ್ತು ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮಗ ಕಟ್ಟಾ ಜಗದೀಶ ನಾಯ್ಡು ವಿಜಯದ ನಗೆಬೀರಿದ್ದಾರೆ.

ಬಿಜೆಪಿ ಪಾಳೆಯದಲ್ಲಿ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಅಧಿಕಾರ ಹಿಡಿಯುವುದು ಖಚಿತವಾಗಿದೆ. ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಸುರೇಶ್ ಕುಮಾರ್, ಸಾಮಾನ್ಯ ವರ್ಗಕ್ಕೆ ಮೇಯರ್ ಹಾಗೂ ಪರಿಶಿಷ್ಟ ಜಾತಿಗೆ ಉಪಮೇಯರ್ ಹುದ್ದೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X