ಹ್ಯಾಟ್ಸ್ ಆಫ್ ಬೆಂಗಳೂರಿಯನ್ಸ್, ಸಿಎಂ

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಬಹಮತ ಪಡೆದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಾದರೂ ಅಭಿವೃದ್ಧಿ ಕಾರ್ಯಗಳಿಗೆ ಕಲ್ಲು ಹಾಕುವ ಕೆಲಸ ಮಾಡಬೇಡಿ ಎಂದು ಅವರು ಪ್ರತಿಪಕ್ಷಗಳಲ್ಲಿ ಮನವಿ ಮಾಡಿಕೊಂಡರು.
ಬೆಂಗಳೂರನ್ನು ಜಾಗತಿಕ ಮಹಾನಗರವನ್ನಾಗಿ ಮಾಡುವುದು ಬಿಜೆಪಿ ಸರಕಾರದ ಗುರಿ. ನೂತನವಾಗಿ ಆಯ್ಕೆಯಾಗಿರುವ ಕಾರ್ಪೋರೇಟರ್ ಗಳು, ಶಾಸಕರು, ಸಂಸದರ ಸಹಭಾಗಿತ್ವದಲ್ಲಿ ಈ ಗುರಿ ಈಡೇರಿಸಲು ಶ್ರಮವಹಿಸುತ್ತೇವೆ ಎಂದರು.
ಬಿಬಿಎಂಪಿ, ಬಿಡಿಎ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಯಲ್ಲಿ ಸುಮಾರು 6 ಸಾವಿರ ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ಮೂರು ವರ್ಷದೊಳಗೆ 22,500 ಕೋಟಿ ರುಪಾಯಿ ಕಾಮಗಾರಿಗಳನ್ನು ಇಷ್ಟರಲ್ಲೇ ಅನುಷ್ಠಾನಗೊಳಿಸಲಾಗುವುದು. ಮಹಾನಗರದ ಚಿತ್ರಣವನ್ನೇ ಬದಲಾಯಿಸುತ್ತೇವೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು 22 ತಿಂಗಳಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದರಿಂದ ಬೆಂಗಳೂರಿನ ಜನ ಬಿಜೆಪಿ ಬೆಂಬಲಿಸಿದ್ದಾರೆ. ಈ ಮೂಲಕ ಅಭಿವೃದ್ದಿ ಪರ ಎಂಬುದನ್ನು ಮತದಾರ ಸಾಬೀತಾಪಡಿಸಿದ್ದಾರೆ.
ನಗರ ಪ್ರದೇಶಗಳ ಅಭಿವೃದ್ಧಿ ವಿರೋಧಿ ಜೆಡಿಎಸ್ ಬಿಬಿಎಂಪಿ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ. ನೈಸ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿರುವ ದೇವೇಗೌಡರಿಗೆ ಈ ಫಲಿತಾಂಶ ಸೂಕ್ತ ಪಾಠ ಕಲಿಸಿದೆ. ಇನ್ನಾದರೂ ಆ ಪಕ್ಷದ ನಾಯಕರು ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಬಲ ನೀಡಬೇಕು. ಇದು ನನ್ನ ವಿನಮ್ರ ಮನವಿ ಎಂದು ಯಡಿಯೂರಪ್ಪ ಹೇಳಿದರು.
ಗೆಲುವಿನ ಮಾಲೆ ಧರಿಸಿದವರು : ವಾರ್ಡ್ 1ರಿಂದ 100
ಗೆಲುವಿನ ಮಾಲೆ ಧರಿಸಿದವರು : ವಾರ್ಡ್ 101ರಿಂದ 198
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications