ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೈರಪ್ಪಗೆ ಅನಕೃ ಪ್ರಶಸ್ತಿ

By Mrutyunjaya Kalmat
|
Google Oneindia Kannada News

SL Bhyarappa
ಬೆಂಗಳೂರು, ಏ. 5 : ಪ್ರಸಕ್ತ ಸಾಲಿನ ಅನಕೃ ಪ್ರಶಸ್ತಿಗೆ ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕೃಷಿಗೆ ಸಂಬಂಧಿಸಿದಂತೆ ಅನಕೃ ಫೌಂಡೇಶನ್ ಪ್ರತಿ ವರ್ಷ ಅನಕೃ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿ ಪತ್ರ, ಒಂದು ಲಕ್ಷ ರುಪಾಯಿ ನಗದು ಹೊಂದಿರುತ್ತದೆ.

ಮೇ ತಿಂಗಳಲ್ಲಿ ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಪ್ರಶಸ್ತಿ ನೀಡುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು ಎಂದು ಅನಕೃ ಫೌಂಡೇಶನ್ ನ ವಿ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.

ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ, ಪ್ರೊ ಎಲ್ ಎಸ್ ಶೇಷಗಿರಿರಾವ್ ಸೇರಿದಂತೆ 14 ಮಂದಿ ಹಿರಿಯ ಸಾಹಿತಿಗಳಿಗೆ ಅನಕೃ ಪ್ರಶಸ್ತಿಯನ್ನು ನೀಡಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X