ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನ ಸರ್ವಾಂಗೀಣ ಅಭಿವೃದ್ದಿಗೆ ಬದ್ದ

By Mrutyunjaya Kalmat
|
Google Oneindia Kannada News

Yeddyurappa
ಬೆಂಗಳೂರು, ಮಾ. 5 : ಬೆಂಗಳೂರಿನ ಜನ ಅಭಿವೃದ್ಧಿಗೆ, ಹೊಸ ಚಿಂತನೆಗೆ ಆಧ್ಯತೆ ನೀಡಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಬಹುಮತದತ್ತ ಹೆಜ್ಜೆ ಹಾಕಿದ್ದು ಅತ್ಯಂತ ಖುಷಿಯಾಗಿದೆ. ಈ ಮೂಲಕ ಬಿಜೆಪಿ ಸರಕಾರದ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ. ಇದೀಗ ನಮ್ಮ ಮುಂದಿರುವ ಮುಖ್ಯ ಗುರಿಯೆಂದರೆ, ಕುಡಿಯುವ ನೀರಿನ ಪ್ರತಿ ವಾರ್ಡ್ ಗೂ ತಲುಪಿಸುವ ಜವಾಬ್ದಾರಿ ಹಾಗೂ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳು ನೀಡುವುದಕ್ಕೆ ಹೆಚ್ಚಿನ ಅಧ್ಯತೆ ನೀಡುತ್ತೇವೆ ಎಂದು ಅವರು ವಿವರಿಸಿದರು.

ಇತ್ತೀಚೆಗೆ ವರದಿಗಳು ಬಂದಾಗ ಬಿಜೆಪಿ-92, ಕಾಂಗ್ರೆಸ್-55 ಹಾಗೂ ಜೆಡಿಎಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. 163 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, 86 ಸ್ಥಾನ ಗಳಿಸಿರುವ ಬಿಜೆಪಿಗೆ ಕೇವಲ 8 ಸ್ಥಾನಗಳ ಕೊರತೆ ಇದೆ. ಮ್ಯಾಜಿಕ್ ನಂಬರ್ 94 ಆಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X