ಜನರಿಗೆ ಪಶ್ಚಾತ್ತಾಪ ಆಗಲಿದೆ

ಫಲಿತಾಂಶದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಬಗ್ಗೆ ಮೊದಲಿನಿಂದಲೂ ಅಪಪ್ರಚಾರ ಹೆಚ್ಚಾಗಿ ನಡೆದಿದೆ. ಈ ಚುನಾವಣೆಯಲ್ಲೂ ಅದೇ ಮುಂದುವರಿಯಿತು. ಇದರಿಂದಾಗಿ ನಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳು ಜನರ ಕಣ್ಣಿಗೆ ಬೀಳದಿರುವುದು ವಿಷಾದಕರ ಎಂದರು.
ಬಿಜೆಪಿಯ ಬಗ್ಗೆ ಜನರಿಗೆ ಇನ್ನೂ ನಂಬಿಕೆ ಇದೆಯೇ ಅಥವಾ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂಬುದು ತಿಳಿಯುತ್ತಿಲ್ಲ. ಬಿಜೆಪಿ ಬೆಂಗಳೂರಿನ ಅಭಿವೃದ್ಧಿಗೆ ಅದ್ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದನ್ನು ಮುಂದೆ ನೋಡುತ್ತೇವೆ. ಜನರಿಗೆ ತಮ್ಮ ತಪ್ಪಿನ ಅರಿವಾಗುತ್ತದೆ. ಒಟ್ಟಿನಲ್ಲಿ ಜನತೆ ನೀಡಿದ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications