ಪೊಲೀಸ್ ಐಟಿ ತಂತ್ರಾಂಶ ಬಗ್ಗೆ ಒಂದಿಷ್ಟು

ಈ ತಂತ್ರಾಂಶದ ಅನುಷ್ಠಾನಕ್ಕೆ ಬೇಕಾಗಿರುವ ದತ್ತಾಂಶ ಕೇಂದ್ರ (ಡಾಟಾ ಸೆಂಟರ್), ವ್ಯಾಪಕ ಸಂಪರ್ಕ ಜಾಲ, ಆಂಟಿ ವೈರಸ್, ಫೆಸಿಲಿಟಿ ಮ್ಯಾನೇಜ್ಮೆಂಟ್ ಸೇವೆಗಳು, ಸಹಾಯವಾಣಿ ಮೊದಲಾದವು ಸಿದ್ಧಗೊಂಡಿವೆ. ಈ ಯೋಜನೆಯ ಅನುಷ್ಠಾನಕ್ಕಾಗಿ 700 ಕೆಲಸದ ದಿನಗಳ ಕ್ಷೇತ್ರ ಅಧ್ಯಯನ, 70 ವಿಮರ್ಶಾ ಸಭೆಗಳು, 30 ಸಾವಿರ ಪುಟಗಳ ದಾಖಲಾತಿಗಳು ಹಾಗೂ ತಂತ್ರಾಂಶ ಅಭಿವೃದ್ಧಿಗೆ 7000 ಕೆಲಸದ ದಿನಗಳನ್ನು ತೆಗೆದುಕೊಳ್ಳಲಾಗಿದೆ. ಈ ವರೆಗೆ ಸುಮಾರು 100ಕ್ಕೂ ಹೆಚ್ಚು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 4 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಈ ತಂತ್ರಾಂಶವನ್ನು ಸಂಪೂರ್ಣವಾಗಿ ಬಳಸಲು ಇನ್ನೂ 14 ಸಾವಿರ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಬೇಕಾಗಿದೆ ಎಂದು ಡಿಜಿಪಿ ಡಾ. ಅಜಯ್ಕುಮಾರ್ ಸಿಂಗ್ ಅವರು ತಿಳಿಸಿದರು.
ಪೊಲೀಸ್ ಐಟಿ ತಂತ್ರಾಂಶದಲ್ಲಿ ಒಟ್ಟು 12 ಮಾಡ್ಯೂಲ್ಗಳಿವೆ. ಅವುಗಳನ್ನು ಅಪರಾಧ, ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ, ಆಡಳಿತ, ಹಣಕಾಸು, ಉಗ್ರಾಣ, ಸಶಸ್ತ್ರ ಮೀಸಲು, ಮೋಟಾರು ಸಾರಿಗೆ, ತರಬೇತಿ, ನಿಸ್ತಂತು, ಪ್ರಾಯೋಗಿಕ ವಿಧಿವಿಜ್ಞಾನ ಪ್ರಯೋಗಾಲಯ, ಕಾರ್ಯಾಧಾರಿತ ಮಾಹಿತಿ ವ್ಯವಸ್ಥೆ ಎಂದು ನಿಗದಿಪಡಿಸಲಾಗಿದೆ.
ಇಂದು ಈ ಮಾಡ್ಯೂಲ್ಗಳಲ್ಲಿ ನಿಸ್ತಂತು, ಮೋಟಾರು ಸಾರಿಗೆ ಮತ್ತು ಸಶಸ್ತ್ರ ಮೀಸಲು ಮಾಡ್ಯೂಲ್ಗಳಿಗೆ ಗೃಹ ಸಚಿವರು ಚಾಲನೆ ನೀಡಿದ್ದು, ಉಳಿದ ಮಾಡ್ಯೂಲ್ಗಳನ್ನು ಹಂತಹಂತವಾಗಿ ಈ ವರ್ಷಾಂತ್ಯದೊಳಗೆ ಅನುಷ್ಠಾನಗೊಳಿಸಲಾಗುವುದೆಂದು ತಿಳಿಸಲಾಯಿತು. ಭಾರತ ಸರ್ಕಾರವು ಕ್ರೈಂ, ಕ್ರಿಮಿನಲ್ ಟ್ರಾಕಿಂಗ್ ನೆಟ್ವರ್ಕ್ ಅಂಡ್ ಸಿಸ್ಟಮ್ಸ್ (ಸಿಸಿಟಿಎನ್ಎಸ್) ಯೋಜನೆಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿರುವ ರಾಜ್ಯ ಎಂದು ಪರಿಗಣಿಸಿದೆ. ಈ ಸಿಸಿಟಿಎನ್ಎಸ್ ಯೋಜನೆಯು ದೇಶದ 14 ಸಾವಿರ ಪೊಲೀಸ್ ಠಾಣೆಗಳು ಮತ್ತು 6 ಸಾವಿರ ಉನ್ನತ ಪೊಲೀಸ್ ಕಚೇರಿಗಳನ್ನು ಸಂಪರ್ಕಗೊಳಿಸುವ ಗುರಿಯನ್ನು ಹೊಂದಿದೆ. ಹಾಗೂ ಮುಖ್ಯ ತಂತ್ರಾಂಶದ ಅಭಿವೃದ್ಧಿಯನ್ನು ಆಯಾ ರಾಜ್ಯಗಳಿಗನುಗುಣವಾಗಿ ಸಿದ್ಧಪಡಿಸಲಾಗುವುದು. ಕರ್ನಾಟಕ ರಾಜ್ಯ ಪೊಲೀಸ್ಗೆ ತನ್ನದೇ ಆದ ಪೊಲೀಸ್ ಐಟಿ ತಂತ್ರಾಂಶವನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆಯೆಂದು ತಿಳಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications