ಬಿಬಿಎಂಪಿ ಮೊದಲ ಮೇಯರ್ ನಟರಾಜ್?

ಮಂಗಳವಾರ ಸಾರಿಗೆ ಸಚಿವ ಆರ್ ಅಶೋಕ್ ಅವರ ನಿವಾಸದಲ್ಲಿ ಹೊಸದಾಗಿ ಆಯ್ಕೆಯಾದ ಕಾರ್ಪೊರೇಟರ್ ಗಳು ಸಭೆ ಸೇರಿ ಮುಂದಿನ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಟರಾಜ್ ಅವರ ಬಗ್ಗೆ ಹೆಚ್ಚಿನವರು ಒಲವು ತೋರಿದರು ಎನ್ನಲಾಗಿದೆ. ಉಪ ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ಕಾರ್ಪೊರೇಟರ್ ಆಯ್ಕೆ ಮಾಡುವ ತಯಾರಿಯಲ್ಲಿರುವ ಬಿಜೆಪಿ ಮುಖಂಡರು, ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ವಾರ್ಡ್ ನತ್ತ ಮುಖ ಮಾಡಿದ್ದಾರೆ. ಸಿವಿ ರಾಮನ್ ನಗರದ 7 ವಾರ್ಡ್ ಗಳಲ್ಲಿ ಬಿಜೆಪಿ ಜಯ ಸಾಧಿಸಿದ್ದು, ಈ ಪೈಕಿ ಮೂವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಇವರಲ್ಲಿ ಒಬ್ಬರನ್ನು ಉಪ ಮೇಯರ್ ಮಾಡುವ ಸಾಧ್ಯತೆ ನಿಚ್ಚಳವಾಗಿದೆ.
ಆಡಳಿತ ಪಕ್ಷದ ನಾಯಕತ್ವಕ್ಕೂ ರೇಸ್ ಶುರುವಾಗಿದ್ದು ಗಂಗ ಭೈರಯ್ಯ, ಕಟ್ಟೆ ಸತ್ಯನಾರಾಯಣ, ವೆಂಕಟೇಶ ಮೂರ್ತಿ, ಬಿ ಆರ್ ನಂಜುಡಪ್ಪ ಇವರುಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಇನ್ನೊಂದು ವಾರದೊಳಗೆ ಎಲ್ಲಾ ಆಯ್ಕೆ ಪ್ರಕ್ರಿಯೆಯನ್ನು ಪೂರೈಸುವುದಾಗಿ ಬಿಜೆಪಿ ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ.
ನಟರಾಜ್ ಆಯ್ಕೆ ಯಾಕೆ?: ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಹರಡಿರುವ ರೆಡ್ದಿ-ಒಕ್ಕಲಿಗ ಸಮುದಾಯದ ಮನ ಗೆಲ್ಲಲು ನಟರಾಜ್ ಅವರನ್ನು ಆರಿಸಿರುವ ಸಾಧ್ಯತೆಯಿದೆ. ಬಸವನಗುಡಿಯ ಕಟ್ಟೆ ಸತ್ಯನಾರಾಯಣ ಕೂಡ ಮೇಯರ್ ಆಕಾಂಕ್ಷಿಯಾಗಿದ್ದು, ಇವರೀರ್ವರ ಮಧ್ಯೆ ಭಾರಿ ಪೈಪೋಟಿ ಇತ್ತು ಎನ್ನಲಾಗಿದೆ. ಆದರೆ, ಕೊನೆ ಗಳಿಗೆಯಲ್ಲಿ ಆರ್ ಅಶೋಕ್ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹೆಚ್ ಎನ್ ಅನಂತ್ ಕುಮಾರ್ ಅವರ ಬೆಂಬಲಿಗರಾದ ನಟರಾಜ್ ಗೆ ಅದೃಷ್ಟ ಒಲಿದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications