ಅದ್ದೂರಿ ಬೀದರ್ ಉತ್ಸವಕ್ಕೆ ಭರದ ಸಿದ್ಧತೆ

ಕೋಟೆ ಆವರಣದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಉತ್ಸವಗಳನ್ನು ಆಚರಿಸುವ ಜಿಲ್ಲೆಗಳು ಕಡಿಮೆ. ಜಿಲ್ಲೆಯ ಜನತೆಯ ಸಹಕಾರದೊಂದಿಗೆ ಸ್ಥಳೀಯವಾಗಿ ಸಂಪನ್ಮೂಲ ಕ್ರೋಢೀಕರಿಸಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಉತ್ಸವ ಪರಂಪರೆ ಮುಂದುವರೆಯಬೇಕು ಎಂಬ ಉದ್ದೇಶದಿಂದ ಬೀದರ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬಿಸಿಲು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಳೆದ ಉತ್ಸವಗಳಿಂದ ಭಿನ್ನವಾಗಿ ಈ ಬಾರಿ ಎಲ್ಲಾ ಕಾರ್ಯಕ್ರಮಗಳನ್ನು ಸಂಜೆ ಬಳಿಕ ಆಯೋಜಿಸಲಾಗುತ್ತಿದೆ. ಉತ್ಸವದ ಆಯೋಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯತೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ, ರಾಜ್ಯ ಮಟ್ಟದ ಕಲಾವಿದರು ಮೂರು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಹರ್ಷಗುಪ್ತಾ ತಿಳಿಸಿದರು.
ಈ ಬಾರಿ ಮುಖ್ಯ ವೇದಿಕೆಯಲ್ಲಿಯೇ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಮ್ಯಾಜಿಕ್ ಪ್ರದರ್ಶನ, ಲಾಫರ್ ಚಾಲೆಂಜ್ ಖ್ಯಾತಿಯ ಹಾಸ್ಯ ಕಲಾವಿದರು ಮನೋರಂಜನೆಯ ರಸದೌತಣ ನೀಡಲಿದ್ದಾರೆ. ಈ ಬಾರಿ ಮುಷಾಯಿರಾ ಕಾರ್ಯಕ್ರಮವನ್ನು ಮಹಮೂದ್ ಗಾವಾನ ಮದರಸಾದಲ್ಲಿ ನಡೆಸಲಾಗುವುದು. ಮದರಸಾದಲ್ಲಿ ಐದು ಸಾವಿರ ಕುರ್ಚಿಗಳನ್ನು ಹಾಕಲಾಗುವುದು. ಮುಷಾಯಿರಾದಲ್ಲಿ ರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗವಹಿಸುವರು ಎಂದು ಹೇಳಿದರು.
ಡೈಮಂಡ್ ಗೋಲ್ಡ್ ಕಾರ್ಡ್: ಉತ್ಸವಕ್ಕೆ ಸಂಪನ್ಮೂಲವನ್ನು ಕ್ರೋಢೀಕರಿಸುವ ಉದ್ದೇಶದಿಂದ ಮಾತ್ರವಲ್ಲ, ಉತ್ಸವದಲ್ಲಿ ಸಮಾಜದ ಎಲ್ಲಾ ಸ್ತರಗಳ ಜನರು ಭಾಗವಹಿಸಲು ಅನುಕೂಲವಾಗುವಂತೆ ಗೋಲ್ಡ್, ಡೈಮಂಡ್ ಮತ್ತು ಪ್ಲಾಟಿನಂ ಕಾರ್ಡುಗಳನ್ನು ಹೊರತರಲಾಗಿದೆ. ಜನರಲ್ಲಿ ತಮ್ಮದೇ ಉತ್ಸವ ಎಂಬ ಭಾವನೆ ಬರಲು ಇದು ಪೂರಕವಾಗಿದೆ. ಮೂರು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜನರಿಗೆ ಪೂರ್ಣ ಮನೋರಂಜನೆ ಒದಗಿಸುವ ಭರವಸೆ ತಮಗಿದೆ ಎಂದರು. ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮಗಳನ್ನು ನೋಡಿ ಆನಂದಿಸಬೇಕೆಂದು ಅವರು ಆಹ್ವಾನ ಕೊಟ್ಟರು.
ತಾರಾ ಮೆರುಗು: ಬೀದರ ಉತ್ಸವದಲ್ಲಿ ಕನ್ನಡದ ಖ್ಯಾತ ಚಿತ್ರನಟ ಸುದೀಪ್, ಮುಂಗಾರು ಮಳೆ ಖ್ಯಾತಿಯ ಪೂಜಾ ಗಾಂಧಿ, ಹಾಸ್ಯ ನಟ ಸಾಧು ಕೋಕಿಲ ಕಾರ್ಯಕ್ರಮ, ಲಾಫರ್ ಚಾಲೆಂಜ್ ಖ್ಯಾತಿಯ ರಾಜು ಶ್ರೀವಾಸ್ತವ, ಲಲ್ಲಿ ಅವರ ಹಾಸ್ಯ ಸಂಜೆ, ಅನೂಪ್ ಜಲೋಟ್ ಅವರ ಗಜಲ್ ಭಕ್ತಿಗೀತೆ ಉತ್ಸವಕ್ಕೆ ಮೆರಗು ನೀಡಲಿವೆ.
ಕಾರ್ಯಕ್ರಮ ವೈವಿಧ್ಯ: ಬೀದರ ಉತ್ಸವದ ಅಂಗವಾಗಿ ಮಹಿಳಾ ಉತ್ಸವ, ಏರ್ ಶೋ, ಪಟಾಕಿ ಪ್ರದರ್ಶನ, ಹೊನಲು ಬೆಳಕಿನ ವಾಲಿಬಾಲ್, ಜಾತ್ರೆ, ಆರೋಗ್ಯ ಮೇಳ, ಕೃಷಿ ಮೇಳ, ಸಾಹಸ ಕ್ರೀಡೆಗಳು, ಚಿತ್ರಕಲಾ ಪ್ರದರ್ಶನ, ಮ್ಯಾರಥಾನ್, ವಸ್ತು ಪ್ರದರ್ಶನ, ಖಾದ್ಯ ಮೇಳ, ಚಲನಚಿತ್ರೋತ್ಸವ, ಕುಸ್ತಿ, ಚೌಬಾರಾದಿಂದ ಕೋಟೆಯವರೆಗೆ ಮೆರವಣಿಗೆ, ಫತೆಹ ದರವಾಜಾದಿಂದ ಕೋಟೆಯ ವರೆಗೆ ಹಿರಿಯ ನಾಗರಿಕರ ನಡಿಗೆ, ಮುಶಾಯಿರಾ ಸೇರಿದಂತೆ ಹತ್ತು ಹಲವು ವೈವಿಧ್ಯಮ ಕಾರ್ಯಕ್ರಮಗಳು ಉತ್ಸವದ ದಿನಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications