ಸವಣೂರು ಜನಕ್ಕೆ ನಿತ್ಯ ಅಪಘಾತದ ಭಯ

ಸವಣೂರಿನ ನ್ಯಾಯಾಲಯದ ಎದುರಿನಲ್ಲಿರುವ ರಸ್ತೆ ನಗರದ ಪ್ರಮುಖ ಜನದಟ್ಟಣೆಯ ರಸ್ತೆಯಾಗಿದ್ದು, ಎಂಟು ಶಾಲೆಗಳು, ನ್ಯಾಯಾಲಯ, ಉಪವಿಭಾಗಾಧಿಕಾರಿಗಳ ಕಛೇರಿ ಸೇರಿದಂತೆ ಹತ್ತು ಹಲವಾರು ಕಛೇರಿಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯ ಕಾಮಗಾರಿ ಕಳೆದ ಒಂದು ತಿಂಗಳಿನಿಂದ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದಾಗಿ ಶಾಲೆಗೆ ಹೋಗುವ ಮಕ್ಕಳು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ರಸ್ತೆಗೆ ಕಲ್ಲುಗಳನ್ನು ಹಾಕಲಾಗಿದ್ದು, ಪ್ರತಿನಿತ್ಯ ಅವಘಡ ಸಂಭವಿಸುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಸಾರ್ವಜನಿಕರು ಹಾಗೂ ವಾಹನ ಸವಾರರಿಗೂ ಪ್ರತಿನಿತ್ಯ ಅಪಘಾತದ ಅಪಾಯಗಳು ಎದುರಾಗುತ್ತಿದ್ದು, ಸಾರ್ವಜನಿಕರಿಗೆ ಅತ್ಯಂತ ಹೆಚ್ಚಿನ ತೊಂದರೆಯಾಗಿದೆ. ಈ ರಸ್ತೆ ಕಾಮಗಾರಿಯನ್ನು ಪುನಃ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದ್ದರೂ, ಯಾವುದೇ ತಾತ್ಕಾಲಿಕ ಪರಿಹಾರವೂ ಲಭ್ಯವಾಗಿಲ್ಲ. ಕಾರಣ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸಬೇಕು ಎಂದು ಪುನಃ ಕೋರಲಾಗುತ್ತಿದೆ. ಇಲ್ಲವಾದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಇರುವ ಅಡೆತಡೆಗಳಬಗ್ಗೆ ಲಿಖಿತ ರೂಪದಲ್ಲಿ ಕಾರಣಗಳನ್ನು ನೀಡಬೇಕು ಎಂದು ಸಾರ್ವಜನಿಕರು ಮನವಿಯಲ್ಲಿ ಕೋರಿದ್ದಾರೆ.
ಪ್ರತಿಭಟನೆ: ಮನವಿ ಸಲ್ಲಿಕೆಯ ಬಳಿಕ ಕೋರ್ಟ್ ರಸ್ತೆಗೆ ಅಳವಡಿಸಲು ತರಲಾಗಿರುವ ಹೈಮಾಸ್ಕ್ ದೀಪದ ಕಂಬಗಳನ್ನೇ ರಸ್ತೆಗೆ ಅಡ್ಡಲಾಗಿ ಇಟ್ಟಿರುವ ಸಾರ್ವಜನಿಕರು, ಸದರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಈ ಬಗ್ಗೆ ಉಪವಿಭಾಗಾಧಿಕಾರಿಗಳೂ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಬಸವರಾಜ ಬುಶೆಟ್ಟಿ, ಬಾಹುದ್ದೀನ್ ಇನಾಂದಾರ್, ರಹಮಾನ್ ಆಪ್ರೀದಿ, ಪ್ರಸನ್ನ ಶೆಟ್ಟಿ, ಮಂಜು ಜೋರಾಪೂರಿ, ಶಿವಪ್ಪ ಕೆಂಚಣ್ಣನವರ್, ಗಿರೀಶ ಮುದಗಲ್ಲ, ರಾಮಾ ಎಮ್.ಕೆ ಸೇರಿದಂತೆ ಹಲವಾರು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications