ಕಗ್ಗಂಟಾಗಿರುವ ಬೆಂಗಳೂರು ಮೇಯರ್ ಆಯ್ಕೆ

ಗೆಲುವು ಸಾಧಿಸಿದ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಅನ್ನುವುದಕ್ಕಿಂತ ಯಾವ ನಾಯಕ ಬೆಂಬಲಿತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬ ವಿಷಯದಲ್ಲಿ ಪಕ್ಷದಲ್ಲಿಯೇ ಭಾರೀ ಭಿನ್ನಮತ ತಲೆದೋರಿದೆ. ಮೇಲ್ನೋಟಕ್ಕೆ ಬೆಂಗಳೂರು ಮೇಯರ್ ಆಯ್ಕೆಯ ಅಧಿಕಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಬಿಟ್ಟಿದ್ದು ಅಂತ ನಾಯಕರು ಹೇಳುತ್ತಿದ್ದರೂ ಒಳಗಿಂದೊಳಗೇ ಕೆಲವರು ಬುಸುಗುಡುತ್ತಿದ್ದಾರೆ.
ಮೇಯರ್ ಆಯ್ಕೆ ಇನ್ನೆರಡುಮೂರು ದಿನಗಳಲ್ಲಿ ನಡೆಯಲಿದೆ ಎಂದು ಅಬಕಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಇಂದು ಹೇಳಿಕೆ ನೀಡಿದ್ದರೆ, ಸಾರಿಗೆ ಸಚಿವ ಆರ್ ಅಶೋಕ್ ಮೇಯರ್ ಆಯ್ಕೆಗೆ ಇನ್ನೂ ಹದಿನೈದರಿಂದ ಇಪ್ಪತ್ತು ದಿನ ಬೇಕು ಅಂತ ಹೇಳಿ ಬೂದಿಯನ್ನು ಉದಿದ್ದಾರೆ. ಮೇಯರ್ ಆಯ್ಕೆ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರಿಗೆ ಬಿಟ್ಟಿದ್ದು ಅಂತ ಅಶೋಕ್ ಹೇಳಿ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ.
ಮೇಯರ್ ಹುದ್ದೆ ಈಬಾರಿ ಸಾಮಾನ್ಯ ವರ್ಗಕ್ಕೆ ಮೀಸಲು. ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಮೇಯರ್ ಕುರ್ಚಿಗೆ ಸಾರಕ್ಕಿ ವಾರ್ಡ್ ನಿಂದ ಆಯ್ಕೆಯಾಗಿರುವ ಎಸ್ ಕೆ ನಟರಾಜ್ ಅವರ ಹೆಸರು ಹೆಚ್ಚಾಗಿ ಕೇಳಿಬರುತ್ತಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ವಸಂತನಗರದಿಂದ ಜಯಶಾಲಿಯಾಗಿರುವ ತಮ್ಮ ಮಗ ಕಟ್ಟಾ ಜಗದೀಶ್ ನಾಯ್ಡು ಮೇಯರ್ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದರೂ, ಅವರೂ ಒಂದು ಕಣ್ಣಿಟ್ಟಿರುವುದು ಗುಟ್ಟಾಗೇನೂ ಉಳಿದಿಲ್ಲ. ಒಟ್ಟಿನಲ್ಲಿ ಬೆಂಗಳೂರು ಮೇಯರ್ ಆಯ್ಕೆ ಗೊಂದಲದ ಗೂಡಾಗಿ ಪರಿಣಮಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications