ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳವಾರ ಮೇಯರ್ ಆಯ್ಕೆ : ಕಟ್ಟಾ

By Mrutyunjaya Kalmat
|
Google Oneindia Kannada News

Katta Subramanya Naidu
ಬೆಂಗಳೂರು, ಏ. 11 : ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಮಂಗಳವಾರ ಸಂಜೆಯೊಳಗೆ ಅವಿರೋಧ ಆಯ್ಕೆ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ರಾಷ್ಟ್ರೀಯ ಭೂಮಾಪಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಅನಂತಕುಮಾರ್ ಹಾಗೂ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಅವರೊಂದಿಗೆ ಸಮಾಲೋಚಿಸಿ ಮೇಯರ್ ಹುದ್ದೆಗೆ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಮೇಯರ್ ಸ್ಥಾನ ಆಕಾಂಕ್ಷಿಗಳಲ್ಲಿ ಮೂರಕ್ಕೂ ಹೆಚ್ಚು ಮಂದಿ ಇದ್ದು, ಇವರೆಲ್ಲ ನಿಪುಣರು, ಬುದ್ಧಿವಂತರು ಮತ್ತು ಅನುಭವಿಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಪೈಕಿ ಒಬ್ಬರನ್ನು ಅವಿರೋಧ ಆಯ್ಕೆ ಮಾಡಲಾಗುವುದು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದು, ಯಾವುದೇ ಗೊಂದಲವಿಲ್ಲದೆ ಆಯ್ಕೆ ನಡೆಯಲಿದೆ ಎಂದು ಕಟ್ಟಾ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X