ಮಂಗಳವಾರ ಮೇಯರ್ ಆಯ್ಕೆ : ಕಟ್ಟಾ

ರಾಷ್ಟ್ರೀಯ ಭೂಮಾಪಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಅನಂತಕುಮಾರ್ ಹಾಗೂ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಅವರೊಂದಿಗೆ ಸಮಾಲೋಚಿಸಿ ಮೇಯರ್ ಹುದ್ದೆಗೆ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಮೇಯರ್ ಸ್ಥಾನ ಆಕಾಂಕ್ಷಿಗಳಲ್ಲಿ ಮೂರಕ್ಕೂ ಹೆಚ್ಚು ಮಂದಿ ಇದ್ದು, ಇವರೆಲ್ಲ ನಿಪುಣರು, ಬುದ್ಧಿವಂತರು ಮತ್ತು ಅನುಭವಿಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಪೈಕಿ ಒಬ್ಬರನ್ನು ಅವಿರೋಧ ಆಯ್ಕೆ ಮಾಡಲಾಗುವುದು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದು, ಯಾವುದೇ ಗೊಂದಲವಿಲ್ಲದೆ ಆಯ್ಕೆ ನಡೆಯಲಿದೆ ಎಂದು ಕಟ್ಟಾ ವಿವರಿಸಿದರು.












Click it and Unblock the Notifications