ಗಣತಿ ಕಾರ್ಯಕ್ಕೆ ಸಜ್ಜಾದ ಸವಣೂರು

ಸವಣೂರಿನಲ್ಲಿ ರವಿವಾರದಿಂದ ಮೂರು ದಿನಗಳ ಪರ್ಯಂತ ಜರುಗಲಿರುವ ಗಣತಿದಾರರ ತರಬೇತಿ ಶಿಬಿರದಲ್ಲಿ ಪ್ರಾಸ್ಥಾವಿಕ ಮಾತನಾಡಿದ ಅವರು, ರಾಷ್ಟ್ರಾದ್ಯಂತ ಏಕಕಾಲಕ್ಕೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕಿರುವ ಗಣತಿ ಕಾರ್ಯಕ್ರಮದ ಬಗ್ಗೆ ನಿರ್ಲಕ್ಷ ವಹಿಸಬೇಡಿ ಎಂದು ತಿಳಿಸಿದರು.
ಪ್ರತಿ 10 ವರ್ಷಗಳಿಗೆ ಒಂದು ಬಾರಿ ಗಣತಿಯನ್ನು ಕೈಗೊಳ್ಳಲಾಗುತ್ತಿದ್ದು, ಈ ಬಾರಿ ಜನಗಣತಿಯೊಂದಿಗೆ ಮನೆಗಣತಿಯನ್ನೂ ನಿರ್ವಹಿಸಬೇಕಾಗಿದೆ. ರಾಷ್ಟ್ರೀಯ ಗುರುತಿನ ಪತ್ರ ವಿತರಣೆ ಸೇರಿದಂತೆ ಸರಕಾರದ ಪ್ರತಿಯೊಂದು ಯೋಜನೆಗಳೂ ಈ ಗಣತಿ ಕಾರ್ಯವನ್ನು ಅವಲಂಬಿಸಿದೆ. ಬರಲಿರುವ ದಿನಗಳಲ್ಲಿ ರಾಷ್ಟ್ರೀಯ ಗುರುತಿನ ಪತ್ರ ಪ್ರತಿಯೊಂದು ಯೋಜನೆಗಳಿಗೂ ಕಡ್ಡಾಯವಾಗಲಿದೆ ಎಂದು ಅವರು ತಿಳಿಸಿದರು.
ತರಬೇತುದಾರರಾದ ಉಪನ್ಯಾಸಕ ವಾಯ್.ವ್ಹಿ ಯತ್ನಳ್ಳಿ, ಅತ್ಯಂತ ಮಹತ್ವಪೂರ್ಣವಾದ ಈ ಗಣತಿ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಕ ಸಮೂಹದ ಮೇಲೆ ವಹಿಸಲಾಗಿದೆ. ಅತ್ಯಂತ ನಿಖರತೆ ಹಾಗೂ ಜವಾಬ್ದಾರಿಯುತವಾದ ಕಾರ್ಯವನ್ನು ಶಿಕ್ಷಕರಿಂದ ನಿರೀಕ್ಷಿಸಲಾಗಿದೆ. ಸರಕಾರದ ಹಲವಾರು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಈ ಗಣತಿ ಅಗತ್ಯವಾಗಿದ್ದು, ಜನಸಂಖ್ಯಾ ಆಧಾರಿತವಾಗಿಯೇ ಚುನಾವಣಾ ಪ್ರಕ್ರಿಯೆಗಳೂ ಜರುಗುತ್ತದೆ ಎಂದು ತಿಳಿಸಿದರು. ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್ ಸೇರಿದಂತೆ ಗಣತಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಾಕ್ಷಚಿತ್ರದೊಂದಿಗೆ ವಿವರಣೆ ನೀಡಿದರು.
ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭೆಯ ಅಧ್ಯಕ್ಷ ಎ.ಎಮ್ ಫರಾಶ್ ನೆರವೇರಿಸಿದರು. ಸದಸ್ಯ ಅಲ್ತಾಫ್ ದುಕಾನದಾರ್ ಸೇರಿದಂತೆ ಎಲ್ಲ ಗಣತಿದಾರರು, ಮೇಲ್ವಿಚಾರಕರು, ಪುರಸಭೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಪಿ.ಆರ್ ನವಲೆ ಕಾರ್ಯಕ್ರಮ ನಿರ್ವಹಿಸಿ, ಆರ್.ಎಸ್ ಈಳಿಗೇರ ವಂದಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications