ಮತ್ತೆ ಸೆಣಸಲಿವೆ ಚಾಲೆಂಜರ್ಸ್ ಮತ್ತು ಚಾರ್ಜರ್ಸ್

ಈ ಪಂದ್ಯದಲ್ಲಿನ ಗೆಲುವು ಚಾಲೆಂಜರ್ಸ್ ಗೆ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಸುಗಮವಾಗಿಸಲಿದೆ. ಸೋತರೆ, ಮುಂದಿನೆರಡು ಪಂದ್ಯಗಳನ್ನು ಗೆಲ್ಲಲೇಬೇಕಿರುವ ಅನಿವಾರ್ಯತೆ ಎದುರಾಗಲಿದೆ. ಅದನ್ನು ತಪ್ಪಿಸಲು ಅನಿಲ್ ಕುಂಬ್ಳೆ ಬಳಗ ಗೆಲುವಿಗಾಗಿ ಎಲ್ಲ ಕಸರತ್ತುಗಳನ್ನು ಮಾಡಬೇಕಿದೆ.
ಬದಲಾಗಿ ಆಡಿರುವ 11 ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಆರರಲ್ಲಿ ಮಣ್ಣುಮುಕ್ಕಿರುವ ಡೆಕ್ಕನ್ ಚಾರ್ಜರ್ಸ್ ತಂಡ ಎದುರಾಳಿ ಮೇಲೆ ಮುಗಿಬೀಳುವುದರಲ್ಲಿ ಅನುಮಾನವಿಲ್ಲ. ಏಪ್ರಿಲ್ 8ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಡೆಕ್ಕನ್ ಚಾರ್ಜರ್ಸ್ ಮಣ್ಣುಮುಕ್ಕಿಸಿತ್ತು. ಈಗ ಆ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಚಾಲೆಂಜರ್ಸ್ ಗೆ ಉತ್ತಮ ಅವಕಾಶ ಒದಗಿಬಂದಿದೆ.
ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿರುವ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಡೆಕ್ಕನ್ ತಂಡ ಕೂಡ ಸಾಕಷ್ಟು ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ. ಕ್ರಿಕೆಟ್ ಪ್ರಿಯರಿಗೆ ಈ ಪಂದ್ಯ ರಸದೌತಣ ಬಡಿಸುವುದರಲ್ಲಿ ಅನುಮಾನವಿಲ್ಲ. ಆಟ ಸಂಜೆ 8ಕ್ಕೆ ಆರಂಭವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು : ಅನಿಲ್ ಕುಂಬ್ಳೆ, ಜಾಕ್ ಕಾಲಿಸ್, ರಾಸ್ ಟೇಲರ್, ಕೆವಿನ್ ಪೀಟರ್ಸನ್, ರಾಹುಲ್ ದ್ರಾವಿಡ್, ಮಾರ್ಕ್ ಬೌಚರ್, ರಾಬಿನ್ ಉತ್ತಪ್ಪ, ಮನೀಷ್ ಪಾಂಡೆ, ವಿರಾಟ್ ಕೋಹ್ಲಿ, ಪ್ರವೀಣ್ ಕುಮಾರ್, ಡೇಲ್ ಸ್ಟೇಯ್ನ್, ವಿನಯ್ ಕುಮಾರ್, ಕೆಮರೂನ್ ವೈಟ್.
ಡೆಕ್ಕನ್ ಚಾರ್ಜರ್ಸ್ : ಆಡಂ ಗಿಲ್ ಕ್ರಿಸ್ಟ್, ಸೈಮಂಡ್ಸ್, ಹರ್ಷೆಲ್ ಗಿಬ್ಸ್, ಹರ್ಮಿತ್ ಸಿಂಗ್, ವಿವಿಎಸ್ ಲಕ್ಷ್ಮಣ್, ಮೋನಿಶ್ ಮಿಶ್ರಾ, ಓಜಾ, ರೋಹಿತ್ ಶರ್ಮಾ, ಆರ್ಪಿ ಸಿಂಗ್, ಡ್ವೈನ್ ಸ್ಮಿತ್, ಚಮಿಂಡ ವಾಸ್, ವೇಣುಗೋಪಾಲ್ ರಾವ್, ಅನಿರುದ್ಧ, ಸುಮನ್, ಅರ್ಜುನ್ ಯಾದವ್.
ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ
ಐಪಿಎಲ್ 3 ಪಂದ್ಯಗಳ ಪಟ್ಟಿ
ಚಾಲೆಂಜರ್ಸ್ vs ಚಾರ್ಜರ್ಸ್ : ಕನ್ನಡದಲ್ಲಿ ಸ್ಕೋರ್
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications