ನಕ್ಸಲಿಸಂ, ಟೆರರಿಸಂ ಎರಡೂ ಒಂದೇ

ಅಖಿಲ ಭಾರತ ವೀರಶೈವ ಮಹಾಸಭಾ ಹಮ್ಮಿಕೊಂಡಿರುವ ಶಿವಯೋಗ ಮಂದಿರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚೆಗೆ ದಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಭೀಕರ ನರಮೇಧಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಒಂದು ದಶಕದಿಂದ ದೇಶದಲ್ಲಿ ನಕ್ಸಲ್ ಮತ್ತು ಭಯೋತ್ಪಾದಕರ ಹಾವಳಿ ಮೀತಿಮೀರಿದೆ. ನಕ್ಸಲಿಸಂ ಮತ್ತು ಟೆರರಿಸಂ ಒಂದೇ ನಾಣ್ಯದ ಎರಡು ಮುಖಗಳು. ಸಂವಿಧಾನ ವಿರೋಧಿಗಳ ದುಷ್ಟ ಶಕ್ತಿಗಳ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಬಡವರ ಶೋಷಣೆ ವಿರೋಧಿಸಿ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿಕೊಳ್ಳುತ್ತಿರುವ ದೇಶದ್ರೋಹಿ ನಕ್ಸಲರ ಉದ್ದೇಶವೇ ಬೇರೆ. ಪ್ರಜಾಪ್ರಭುತ್ವ ಸರಕಾರವನ್ನು ಕಿತ್ತೆಸೆದು ದೇಶದಲ್ಲಿ ಅರಾಜಕತೆ ಉಂಟು ಮಾಡುವುದು ಅವರ ಗುರಿ. ಇದಕ್ಕೆ ನಾವುಗಳು ಎಂದಿಗೂ ಅವಕಾಶ ನೀಡಬಾರದು. ನಕ್ಸಲರ ನಿಗ್ರಹಕ್ಕೆ ಕೇಂದ್ರ ಸರಕಾರ ತೆಗೆದುಕೊಳ್ಳುವ ಎಲ್ಲ ತೀರ್ಮಾನಗಳಿಗೂ ಬಿಜೆಪಿ ಪಕ್ಷ ಬೆಂಬಲಿಸುತ್ತದೆ. ದೇಶಕ್ಕೆ ಕಂಟಕವಾಗಿ ಪರಿಣಮಿಸಿರುವ ಆತಂಕವಾದಿಗಳನ್ನು ಬುಡಸಮೇತ ಕಿತ್ತು ಹಾಕಬೇಕಿದೆ. ಕೇಂದ್ರ ಸರಕಾರ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಅಡ್ವಾಣಿ ಸಲಹೆ ನೀಡಿದರು.
12 ನೇ ಶತಮಾನದಲ್ಲಿ ಸಾಮಾಜಿಕ ನ್ಯಾಯಕ್ಕೆ ಹೊಸ ಅರ್ಥ ಕಲ್ಪಿಸಿಕೊಟ್ಟ ಜಗಜ್ಯೋತಿ ಬಸವಣ್ಣನನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ ಅಡ್ವಾಣಿ, ಅವರ ಮಾರ್ಗದರ್ಶನ ಹಾಗೂ ತತ್ವದಡಿಯಲ್ಲಿ ಬಿಜೆಪಿ ಮುನ್ನೆಡೆದಿದೆ ಎಂದರು. ದೇಶದ ವಿವಿಧ ಭಾಗಗಳನ್ನು ಅನೇಕ ಸಲ ಸುತ್ತಿದ್ದೇನೆ. ಸಾಧು ಸಂತರು, ಮಠ ಮಾನ್ಯಗಳು ಅಧ್ಯಾತ್ಮಿಕಕ್ಕೆ ಹೆಚ್ಚಿನ ಒತ್ತು ಕೊಟ್ಟಿವೆ. ಆದರೆ, ಕರ್ನಾಟಕ ಮಠಾಧೀಶರುಗಳು ಶೈಲಿಯೇ ವಿಶಿಷ್ಟ. ಅವರು ಮಾಡಿರುವ ಶೈಕ್ಷಣಿಕ, ಆರೋಗ್ಯ ಕ್ರಾಂತಿಗಳ ಬಗ್ಗೆ ಎಷ್ಟು ಮಾತನಾಡಿದರೂ ಸಾಲದು. ಕರ್ನಾಟಕದ ಮಠಾಧೀಶರ ಬಗ್ಗೆ ಮಾತನಾಡಲು ಶಬ್ಧಗಳಿಲ್ಲ. ಒಂದು ಮಾತಿನಲ್ಲಿ ಹೇಳುವುದಾದರೆ ಅವರಿಗೆ ನನ್ನ ಕೋಟಿ ನಮನಗಳು ಎಂದು ಬಿಜೆಪಿ ಹಿರಿಯ ನಾಯಕ ಮೂಕವಿಸ್ಮಿತರಾದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications