ಕ್ರಿಶ್ಚಿಯನ್ ಸಂಸ್ಥೆಗಳ ಮತಾಂತರ ಹಾವಳಿ

ಜಿಲ್ಲೆಯಲ್ಲಿರುವ ಹಿಂದುಳಿದ ಜನಾಂಗಗಳಿಗೆ ಕೆಲ ಕ್ರಿಶ್ಚಿಯನ್ ಸಂಘಟನೆಗಳು ವಿವಿಧ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ. ಆರ್ಥಿಕ ಹಿಂದುಳಿದ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡಿರುವ ಕ್ರಿಶ್ಚಿಯನ್ ಸಂಘಟನೆಗಳು ಈಗಾಗಲೇ ಸಾಕಷ್ಟು ಸಂಖ್ಯೆಯ ಜನರನ್ನು ಮತಾಂತರಗೊಳಿಸಿದ್ದಾರೆ. ಸರಕಾರ ಈ ಕೂಡಲೇ ಎಚ್ಚತ್ತು ಮತಾಂತರ ತಡೆಯಬೇಕು ಅಲ್ಲದೇ, ಹಿಂದುಳಿದ ಪ್ರದೇಶದ ಜವನರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿಬೇಕು ಎಂದು ವೇದಿಕೆ ಮುಖ್ಯಸ್ಥ ಮುನಿಯಪ್ಪ ಸರಕಾರವನ್ನು ಆಗ್ರಹಿಸಿದ್ದಾರೆ.
ಕ್ರಿಶ್ಚಿಯನ್ ಸಂಘಟನೆಗಳ ವ್ಯವಸ್ಥಿತ ಕೃತ್ಯ ಇದಾಗಿದ್ದು, ಹಿಂದುಳಿದ ಮತ್ತು ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನಾಂಗವನ್ನು ಗುರಿಯಾಗಿರಿಸಿಕೊಂಡು ಕ್ರಿಶ್ಚಿಯನ್ ಸಂಘಟನೆಗಳು ಕಾರ್ಯಾಚರಣೆ ನಡೆಸಿವೆ. ಇದಕ್ಕೆ ಸಂಬಂಧಿಸಿದಂತೆ ಈ ಕೃತ್ಯ ತಡೆಯಲು ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮುನಿಯಪ್ಪ ಎಚ್ಚರಿಕೆ ನೀಡಿದರು.












Click it and Unblock the Notifications