ಅರ್ ಸಿಬಿಗೆ ಮತ್ತೆ ಮಣ್ಣು ಮುಕ್ಕಿಸಿದ ಡೆಕ್ಕನ್

ಡೆಕ್ಕನ್ ಚಾರ್ಜರ್ಸ್ ಒಡ್ಡಿದ 152 ಸವಾಲನ್ನು ಸಾಧಿಸಲು ವಿಫಲವಾದ ಬೆಂಗಳೂರು ತಂಡ 19.4 ಓವರುಗಳಲ್ಲಿ 138 ರನ್ನುಗಳಿಗೆ ತನ್ನೆಲ್ಲಾ ವಿಕೆಟ್ ಒಪ್ಪಿಸಿ ಹೀನಾಯ ಸೋಲು ಅನುಭವಿಸಿತು. ಇದರೊಂದಿಗೆ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಸೋಲು ಹಾಗೂ ಜಯಗಳೊಂದಿಗೆ 12 ಅಂಕ ಸಂಪಾದಿಸಿರುವ ಅನಿಲ್ ಕುಂಬ್ಳೆ ಬಳಗ ಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೂ ಸೆಮಿಫೈನಲ್ ಹಾದಿ ಸುಗಮಗೊಳಿಸಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಆಡಂ ಗಿಲ್ಕ್ರಿಸ್ಟ್ ಪಡೆ ಕೂಡಾ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಜಯ ಹಾಗೂ ಸೋಲುಗಳೊಂದಿಗೆ 12 ಅಂಕ ಕಲೆ ಹಾಕಿದ್ದು, ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ನೆಗೆತ ಕಂಡಿದೆ.
ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ
ಐಪಿಎಲ್ 3 ಪಂದ್ಯಗಳ ಪಟ್ಟಿ
ಚಾಲೆಂಜರ್ಸ್ vs ಚಾರ್ಜರ್ಸ್ : ಕನ್ನಡದಲ್ಲಿ ಸ್ಕೋರ್
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ , ಉತ್ತಮ ಆರಂಭ ಕಂಡಿತು. ವೇಗಿ ಡೇಲ್ ಸ್ಟೈನ್ ಮೂರು ವಿಕೆಟ್ ಗಳಿಸಿ ಡೆಕ್ಕನ್ಗೆ ಶಾಕ್ ನೀಡಿದರು. ನಾಯಕ ಗಿಲ್ಕ್ರಿಸ್ಟ್ (೦)ಮತ್ತು ಟಿ. ಸುಮನ್(೦) ಅಲ್ಲದೆ ಹರ್ಷಲ್ ಗಿಬ್ಸ್ರನ್ನು (12) ಕ್ಲೀನ್ ಬೌಲ್ಡ್ ಮಾಡಿದರು.
ನಂತರ ರೋಹಿತ್ ಶರ್ಮಾ(51 ರನ್, 46 ಎಸೆತ) ಹಾಗೂ ಮೊನಿಷ್ ಮಿಶ್ರಾ (41 ರನ್, 30 ಎಸೆತ)ಉತ್ತಮ ಜೊತೆಯಾಟದ ಮೂಲಕ ಚೇತರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಆಮೇಲೆ, ಆಂಡ್ರ್ಯೂ ಸೈಮಂಡ್ಸ್ 19 ಹಾಗೂ ರೈನ್ ಹ್ಯಾರಿಸ್ ಅಜೇಯ 13 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಠುಸ್ ಆದ ಕಾಲಿಸ್, ಮನೀಷ್ ಜೋಡಿ: ಆರ್ ಸಿಬಿ ಆರಂಭಿಕ ಆಟಗಾರರ ವೈಫಲ್ಯ ಕಂಡಿತು. ಮನೀಷ್ ಖಾತೆ ತೆರೆಯದೇ ಔಟಾದರೆ, ಕಾಲಿಸ್ 37 ಎಸೆತಗಳಲ್ಲಿ ಕೇವಲ 27 ರನ್ ಗಳಿಸಿದರು.ಆದರೆ ರಾಹುಲ್ ದ್ರಾವಿಡ್ ಜೊತೆ 74 ರನ್ ಜೊತೆಯಾಟದಲ್ಲಿ ಕಾಲಿಸ್ ಭಾಗಿಯಾದರು. ದ್ರಾವಿಡ್ ಉತ್ತಮ ಆಟ ಪ್ರದರ್ಶಿಸಿ ಕೇವಲ 35 ಎಸೆತಗಳಲ್ಲಿ 49 ರನ್ ಗಳಿಸಿದರು.
ನಂತರ ಬಂದವರಲ್ಲಿ ಉತ್ತಪ್ಪ ಹೊರತು ಪಡಿಸಿ ಉಳಿದವರು ಕ್ರೀಸ್ ಗೆ ಬಂದಷ್ಟೇ ವೇಗದಲ್ಲಿ ಪೆವಿಲಿಯನ್ ಗೆ ಮರಳಿದರು. ರೋಸ್ ಟೇಲರ್ (1), ವಿರಾಟ್ ಕೊಹ್ಲಿ (3), ಕ್ಯಾಮರೂನ್ ವೈಟ್ (4), ವಿನಯ್ ಕುಮಾರ್ (4), ಡೇಲ್ ಸ್ಟೈನ್ (0) ಮತ್ತು ಕೆ.ಪಿ. ಅಪ್ಪಣ್ಣ (1) .ಉತ್ತಪ್ಪ ಕೇವಲ 20 ಎಸೆತಗಳಲ್ಲಿ ಮೂರು ಸಿಕ್ಸರುಗಳ ನೆರವಿನಿಂದ 34 ರನ್ ಗಳಿಸಿದರು. ಡೆಕ್ಕನ್ ಪರ ಹ್ಯಾರಿಸ್, ಆರ್.ಪಿ. ಸಿಂಗ್, ಪ್ರಗ್ಯಾನ್ ಓಜಾ ಮತ್ತು ಹರ್ಮಿತ್ ಸಿಂಗ್ ತಲಾ ಎರಡು ವಿಕೆಟ್ ಕಿತ್ತರೆ ಆಂಡ್ರ್ಯೂ ಸೈಮಂಡ್ಸ್ ಒಂದು ವಿಕೆಟ್ ಪಡೆದರು. ಉತ್ತಮ ಬೌಲಿಂಗ್ ಪ್ರದರ್ಶಿಸಿ ಎರಡು ವಿಕೆಟ್ ಕಿತ್ತ ಹರ್ಮಿತ್ ಸಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications