ಅಂಬೇಡ್ಕರ್ ಗೆ ಅಪಮಾನ, ಯುಆರ್ಎ ಖಂಡನೆ

ಹಂಪೆ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಸಮಾಲೋಚನ ಕಾರ್ಯಾಗಾರ ನಡೆಯುತ್ತಿರುವಾಗಲೇ ದಲಿತ ಹೋರಾಟಗಾರರಿಗೆ ಸ್ಪಂದಿಸಿ, ಘಟನಾ ಸ್ಥಳವಾದ ಪರಿಶಿಷ್ಟಜಾತಿ, ಪಂಗಡದ ವಿದ್ಯಾರ್ಥಿ ವಸತಿ ನಿಲಯಕ್ಕೆ ತೆರಳಿದ ಯು.ಆರ್. ಅನಂತಮೂರ್ತಿ, ಹೋರಾಟಕ್ಕೆ ಬೆಂಬಲಿಸಿ, ಇದರ ಹಿಂದಿರುವ ಹುನ್ನಾರವನ್ನು ಅರ್ಥ ಮಾಡಿಕೊಳ್ಳಬೇಕು. ಎದುರಾಳಿಗಳನ್ನು ನೈತಿಕ ಹೋರಾಟದ ಮೂಲಕ, ವಿವೇಕದ ಮೂಲಕ ಸೋಲಿಸಬೇಕು ಎಂದು ಕರೆ ನೀಡಿದರು.
ಹಂಪೆ ಕನ್ನಡ ವಿಶ್ವವಿದ್ಯಾಲಯದ 80 ಎಕರೆ ಭೂಮಿ ಉಳಿಸಿಕೊಳ್ಳುವ ಹೋರಾಟಕ್ಕೂ, ಒಂದು ದಿನ ಪತ್ರಿಕೆಯಲ್ಲಿ ವಿಶ್ವವಿದ್ಯಾಲಯದ ಬಗ್ಗೆ ಬಂದ ವರದಿಗೂ ಹಾಗೂ ಸಮಾಲೋಚನಾ ಕಾರ್ಯಾಗಾರವನ್ನು ತಡೆಯಬೇಕೆಂಬ ಪ್ರಯತ್ನಕ್ಕೂ ಎಲ್ಲದಕ್ಕೂ ಈ ಘಟನೆ ಸಂಬಂಧಿಸಿದ್ದೇ ಆಗಿದೆ. ಇಡೀ ಘಟನೆಯನ್ನು ಖಂಡಿಸಿ, ನಿರ್ಣಯ ತೆಗೆದುಕೊಂಡು ಸಮಾಲೋಚನಾ ಕಾರ್ಯಾಗಾರವನ್ನು ಮುಂದುವರೆಸುತ್ತೇವೆ. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸುವ ಮೂಲಕ ದುಷ್ಕರ್ಮಿಗಳಿಗೆ ಉತ್ತರ ನೀಡಬೇಕು ಎಂದರು.
ವಿಶ್ರಾಂತ ಕುಲಪತಿ ಡಾ. ಚಂದ್ರಶೇಖರ ಕಂಬಾರ ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತ ಪಡಿಸಿ, ಇದು ಕೈಲಾಗದವರ ಹೇಯ ಕೃತ್ಯ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂದರು. ಚಿಂತಕ ಜಿ.ಕೆ. ಗೋವಿಂದರಾವ್ ಮಾತನಾಡಿ, ಇದು ಸರ್ಕಾರಕ್ಕೆ ಆಗಿರುವ ಅವಮಾನವಲ್ಲ, ಶೋಷಿತ ಜನರಿಗೆ ಆಗಿರುವ ಅಪಮಾನ ಎಂದು ಟೀಕಿಸಿದರು.
ವಿಶ್ರಾಂತ ಕುಲಪತಿ ಡಾ. ಎಚ್.ಜಿ. ಲಕ್ಕಪ್ಪಗೌಡ, ಕುಲಸಚಿವ ಮಂಜುನಾಥ ಬೇವಿನಕಟ್ಟಿ, ಲೇಖಕರಾದ ಡಾ. ಮೊಗಳ್ಳಿ ಗಣೇಶ್, ಡಾ. ರಹಮತ್ ತರಿಕೆರೆ, ಉಷಾ, ಡಾ. ಹಿ.ಚಿ.ಬೋರಲಿಂಗಯ್ಯ, ಡಾ. ಕರೀಗೌಡ ಬೀಚನಹಳ್ಳಿ ಸೇರಿದಂತೆ ಅನೇಕ ಅಧ್ಯಾಪಕರು, ಪ್ರಾಧ್ಯಾಪಕರು ಹೋರಾಟಕ್ಕೆ ಬೆಂಬಲಿಸಿದರು.
ಘಟನೆ ಹಿನ್ನೆಲೆ : ಹಂಪೆ ಕನ್ನಡ ವಿಶ್ವವಿದ್ಯಾಲಯದ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳಿಗೆ ಸೋಮವಾರ ರಾತ್ರಿ ದುಷ್ಕರ್ಮಿಗಳು ಮಸಿ ಬಳಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕನ್ನಡ ವಿಶ್ವವಿದ್ಯಾಲಯದ ಪರಿಶಿಷ್ಟಜಾತಿ ನೌಕರರ ಸಂಘಟನೆಯ ನೌಕರರು, ಕುಲಪತಿ ಮತ್ತು ಕುಲಸಚಿವರನ್ನು ಭೇಟಿ ಮಾಡಿ ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಡಿವೈಎಸ್ಪಿ ಜಗದೀಶ್ ಗೆ ಮನವಿ ಸಲ್ಲಿಸಿದರು. ಗ್ಯಾನಪ್ಪ ಬಡಿಗೇರ ಈ ಹೋರಾಟದ ನೇತೃತ್ವವಹಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications