For Daily Alerts
ವಾರಣಾಸಿ ಪುರೋಹಿತರ ಕೈಗೆ ಕೋಳ!
ಗೋಲ್ಡನ್ ಟವರ್ ನ ಮೇಲ್ಚಾವಣಿಯಲ್ಲಿ ಪತ್ತೆಯಾದ ಮೂರು ಯಜ್ಞ ಕುಂಡಗಳೇ ಅಗ್ನಿ ದುರಂತಕ್ಕೆ ಕಾರಣ ಎಂಬುದನ್ನು ಪತ್ತೆ ಹಚ್ಚಿರುವ ಪೊಲೀಸ್ ಆಯುಕ್ತ ಶಂಕರ ಬಿದರಿಯವರ ಪಡೆ, ಹೋಮ ನಡೆಸಿದ 13 ಮಂದಿ ಪುರೋಹಿತರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 285ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೆಯೋಹಾಲ್ ನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಬಂಧಿಸಬೇಕಾದವರನ್ನು ಬಿಟ್ಟು ಬಡಪಾಯಿಗಳನ್ನು ಬಂಧಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಾಧೀಶರು, ಪುರೋಹಿತರನ್ನು ಜಾಮೀನು ನೀಡಿ ಬಿಟ್ಟು ನ್ಯಾಯಾಲಯಕ್ಕೆ ಕರೆತಂದಿದ್ದಕ್ಕೆ ಸ್ಪಷ್ಟೀಕರಣ ಕೇಳಲಾಗಿದೆ. ತಪ್ಪಿಸಿಕೊಳ್ಳಲು ಹಿರಿಯ ಅಧಿಕಾರಿಗಳ ಆದೇಶ ಎಂದು ಸಬೂಬು ನೀಡಿದಾಗ ಯಾರ್ರೀ ಅದು ಸೀನಿಯರ್ ಆಫೀಸರ್ ಎಂದು ತರಾಟೆಗೆ ತೆಗೆದುಕೊಂಡ ಘಟನೆ ನ್ಯಾಯಾಲಯದಲ್ಲಿ ನಡೆದಿದೆ.
Story first published: Wednesday, April 14, 2010, 13:11 [IST]