Get Updates
Get notified of breaking news, exclusive insights, and must-see stories!

ಹುತಾತ್ಮರ ಸ್ಮಾರಕಕ್ಕೆ ಕಾಂಗ್ರೆಸ್ ವಿರೋಧ

Congress logo
ಬೆಂಗಳೂರು, ಏ. 14 : ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ನಲ್ಲಿ ಯೋಧರ ಸ್ಮಾರಕ ನಿರ್ಮಿಸಲು ಹೊರಟಿರುವ ಸರಕಾರವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸಿದೆ. ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿ ಅವರನ್ನು ಅವಹೇಳನ ಮಾಡಲು ಸರಕಾರ ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು,ಅಭಿವೃದ್ಧಿ ಹೆಸರಿನಲ್ಲಿ ಈಗಾಗಲೇ ಸಾಕಷ್ಟು ಮರಗಳ ಮಾರಣಹೋಮ ಮಾಡಲಾಗಿದೆ. ಇಂಥ ಸಂದರ್ಭದಲ್ಲಿ ಸರಕಾರ ಇಂದಿರಾ ಗಾಂಧಿ ಸಂಗೀತ ಕಾರಂಜಿ ಪಾರ್ಕ್ ನಲ್ಲಿ ಹುತಾತ್ಮರ ಸ್ಮಾರಕ ನಿರ್ಮಿಸಿ ಮತ್ತಷ್ಟು ಮರಗಳ ನಾಶಕ್ಕೆ ಮುಂದಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಯೋಧರ ಸ್ಮಾರಕವನ್ನು ಪ್ರತ್ಯೇಕ ಸ್ಥಳದಲ್ಲಿ ನಿರ್ಮಿಸಬೇಕು ಹಾಗೂ ಉದ್ಯಾನವನದಲ್ಲಿ ಸ್ಮಾರಕಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಯೋಧರ ಸ್ಮಾರಕ ಸರಕಾರದ ಸಮರ್ಥನೆ

ಇಂದಿರಾಗಾಂಧಿ ಸಂಗೀತ ಕಾರಂಜಿ ಸ್ಮಾರಕ ಪಾರ್ಕ್ ನಲ್ಲಿ ಸೈನಿಕ ಸ್ಮಾರಕ ಸ್ಥಾಪಿಸುವ ತನ್ನ ನಿರ್ಧಾರವನ್ನು ಸರಕಾರ ಸಮರ್ಥಿಸಿಕೊಂಡಿದೆ. ದೇಶಕ್ಕಾಗಿ ಪ್ರಾಣ ತೆತ್ತ ಯೋಧರನ್ನು ಸದಾ ಸ್ಮರಿಸಿಕೊಳ್ಳಲು ಮತ್ತು ದೇಶ ರಕ್ಷಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ನಿರ್ಮಾಣ ಕಾರ್ಯಕೈಗೊಳ್ಳಲಾಗಿದೆ ಎಂದು ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+