ಶಶಿ ತರೂರ್ ಗೆ ದಾವೂದ್ ಕೊಲೆ ಬೆದರಿಕೆ

ಲಲಿತ್ ಮೋದಿಯ ಕ್ಷಮೆ ಕೇಳದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ದಾವೂದ್ ಇಬ್ರಾಹಿಂ ಬೆದರಿಸಿರುವುದಾಗಿ ತಿಳಿದುಬಂದಿದೆ. ಈ ವಿಷಯವನ್ನು ಶಶಿ ತರೂರ್ ಅವರ ವಿಶೇಷ ಕರ್ತವ್ಯಾಧಿಕಾರಿ ದೃಢಪಡಿಸಿದ್ದಾರೆ. ಬೆದರಿಕೆ ಬಂದಿರುವುದನ್ನು ಗೃಹ ಮಂತ್ರಾಲಯಕ್ಕೂ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.
ಕೊಚ್ಚಿ ಫ್ರಾಂಚೈಸಿಗೆ ಸಂಬಂಧಿಸಿದಂತೆ ಉದ್ಭವವಾಗಿರುವ ಜಟಾಪಟಿ ನಾನಾ ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ. ವಿದೇಶಾಂಗ ಖಾತೆ ಸಚಿವರಾಗಿದ್ದರೂ ಫ್ರಾಂಚೈಸಿಯಲ್ಲಿ ಆಸಕ್ತಿ ತೋರಿಸುತ್ತಿರುವ ಶಶಿ ತರೂರ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಬಿಜೆಪಿ ದನಿ ಎತ್ತಿತ್ತು. ಕೊಚ್ಚಿ ಫ್ರಾಂಚೈಸಿ ಪಾಲುದಾರರಾಗಿರುವ ರೆಂಡೆಜ್ವಸ್ ಸ್ಪೋರ್ಟ್ಸ್ ವರ್ಲ್ಡ್ ಕಂಪನಿಯಲ್ಲಿ ತರೂರ್ ಮದುವೆಯಾಗುತ್ತಾರೆನ್ನಲಾದ ಸುನಂದಾ ಪುಷ್ಕರ್ ಅವರು ಶೇ.18ರಷ್ಟು ಪಾಲುದಾರಿಕೆ ಹೊಂದಿದ್ದಾರೆ.
ಸುನಂದಾ ಪುಷ್ಕರ್ ಅವರ ಹೆಸರನ್ನು ಲಲಿತ್ ಮೋದಿ ಬಹಿರಂಗಪಡಿಸಿದ್ದೇ ಶಶಿ ತರೂರ್ ಮತ್ತು ಲಲಿತ್ ಮೋದಿ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ. ಕೊಚ್ಚಿ ತಂಡ ಕೊಳ್ಳುವವರ ಹೆಸರನ್ನು ಬಹಿರಂಗಪಡಿಸಬಾರದೆಂದು ಮೋದಿಗೆ ತರೂರ್ ತಾಕೀತು ಮಾಡಿದ್ದರು.
ಆದರೆ, ಈ ಹಗರಣದಲ್ಲಿ ದಾವೂದ್ ಇಬ್ರಾಹಿಂ ಮೂಗು ತೂರಿಸಿರುವುದು ಮತ್ತು ಮೋದಿ ಬೆಂಬಲಕ್ಕೆ ದಾವೂದ್ ಮುಂದೆ ಬಂದಿರುವುದು ಅನೇಕರ ಹುಬ್ಬು ಏರುವಂತೆ ಮಾಡಿದೆ. ಐಪಿಎಲ್ ಪಾಲುದಾರಿಕೆಯಲ್ಲಿ ದಾವೂದ್ ಇಬ್ರಾಹಿಂ ಹಣದ ಕೈವಾಡವೂ ಇರಬಹುದೆ ಎಂಬ ಪ್ರಶ್ನೆ ಉದ್ಭವವಾಗುವಂತೆ ಮಾಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications