ಅಸ್ಪೃಶ್ಯತೆ ಕರಾಳ ಛಾಯೆ ಇನ್ನೂ ಜೀವಂತ

ಸವಣೂರಿನ ಕಂದಾಯ ಇಲಾಖಾ ಆವರಣದಲ್ಲಿಂದು ಜರುಗಿದ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ವಿಷಯವನ್ನು ಗ್ರಹಿಸುವ ಸಾಮರ್ಥ್ಯ ಪ್ರತಿ ವ್ಯಕ್ತಿಯಲ್ಲಿಯೂ ಏಕರೂಪವಾಗಿದ್ದರೂ, ಅದಕ್ಕೆ ಜ್ಞಾನದ ಬಲವನ್ನು ನೀಡಬೇಕು. ದಲಿತ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದರು.
ದಲಿತ ಸಮುದಾಯದ ಅಭಿವೃದ್ದಿಗೆ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಸರಕಾರದ ಯೋಜನೆಗಳ ಸೌಲಭ್ಯವನ್ನು ಪಡೆಯಲು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ ಅವರು, ದಲಿತ ಸಮುದಾಯದ ಪ್ರತಿಯೊಂದು ಬೇಡಿಕೆಗಳಿಗೂ ತಾವು ಸ್ಪಂದಿಸುವ ಭರವಸೆ ನೀಡಿದರು.
ಕಾರ್ಯಕ್ರಮದ ಅಡಿ ಉಪನ್ಯಾಸ ನೀಡಿದ ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಧ್ಯಾಪಕರಾದ ಚಂದ್ರುಗೌಡ ಪಾಟೀಲ, ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಸಾಧನೆಗಳ ಬಗ್ಗೆ ವಿವರಣೆ ನೀಡಿದರು. ಜಾತಿ ವ್ಯವಸ್ಥೆಯ ಅಡಿ ಅಂಬೇಡ್ಕರ್ ಸೇರಿದಂತೆ ದಲಿತ ಸಮುದಾಯ ಎದುರಿಸಿದ ಹಲವಾರು ನೋವಿನ ಚಿತ್ರಣ ನೀಡಿದ ಅವರು, ಅಸ್ಪೃಶ್ಯತೆಯ ಕರಾಳ ಛಾಯೆ ಇಂದಿಗೂ ಉಳಿದುಕೊಂಡಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ತಾ.ಪಂ ಅಧ್ಯಕ್ಷೆ ಲಕ್ಷ್ಮಿ ಕಲಕೋಟಿ, ದಲಿತ ಸಮುದಾಯದ ಪ್ರತಿಯೊಂದು ಮಗುವೂ ಪರಿಪೂರ್ಣ ಶಿಕ್ಷಣವನ್ನು ಹೊಂದಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ ಉಪಾಧ್ಯಕ್ಷೆ ಶಶಿಕಲಾ ಪಾಟೀಲ, ಸ್ಥಾಯಿ ಸಮೀತಿ ಅಧ್ಯಕ್ಷ ರಾಮಣ್ಣ ಕಳಸದ, ಪುರಸಭೆಯ ಅಧ್ಯಕ್ಷ ಎ.ಎಮ್ ಫರಾಶ್, ಉಪಾದ್ಯಕ್ಷ ಶಂಕರ ದೊಡ್ಮನಿ, ಮುಖಂಡರಾದ ಚಿನ್ನಪ್ಪ ದೇವಸೂರ, ಶ್ರೀಕಾಂತ ಲಕ್ಷ್ಮೇಶ್ವರ, ಹನುಮಂತಪ್ಪ ದೊಡ್ಮನಿ, ತಹಶೀಲ್ದಾರ ಡಾ. ಪ್ರಶಾಂತ ನಾಲವಾರ, ಪಿ.ಐ ಕೆ. ಚಂದ್ರಪ್ಪ ಸೇರಿದಂತೆ ಹಲವಾರು ಪ್ರಮುಖರು, ವಿವಿಧ ಇಲಾಖಾ ಅಧಿಕಾರಿಗಳು, ದಲಿತ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮೆರವಣಿಗೆ : ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರ ಮೆರವಣಿಗೆಯನ್ನು ವಿವಿಧ ವಾಧ್ಯ ವೈಭವಗಳೊಂದಿಗೆ ಕೈಗೊಳ್ಳಲಾಯಿತು. ಅಂಬೇಡ್ಕರ್ ನಗರದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಉಪವಿಭಾಗಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖಾ ಪ್ರತಿನಿಧಿಗಳು, ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications